ಕ್ರೈಂ

ತಾರಿಹಾಳದ ರಾಮನಗರ ಬಳಿ ಅಂದರ್-ಬಾಹರ್ ಜೂಜಾಟಕ್ಕೆ ಪೊಲೀಸರ ದಾಳಿ; 5 ಮಂದಿ ಬಂಧನ

ಮೂಲಕ News Desk | ಪ್ರಕಟಿಸಲಾಗಿದೆ July 22, 2026 July 22, 2026 | 12:40 PM 21 ವೀಕ್ಷಣೆಗಳು

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಗ್ರಾಮದ ರಾಮನಗರ ಸಮೀಪ ಖುಲ್ಲಾ ಜಾಗದಲ್ಲಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.


ಪೊಲೀಸರು ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ಬಂಧಿತರಿಂದ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಹುಬ್ಬಳ್ಳಿ ಹೊರವಲಯದಲ್ಲಿ ಈ ರೀತಿಯ ಜೂಜಾಟ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಶಾಶ್ವತವಾಗಿ ಕಡಿವಾಣ ಬೀಳುತ್ತದೆಯೇ ಅಥವಾ ಮತ್ತೆ ಯಥಾಸ್ಥಿತಿ ಮುಂದುವರಿಯುತ್ತದೆಯೇ ಎಂಬುದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.


ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.