ಧಾರವಾಡ: ಇಲ್ಲಿನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಏ.26ರಂದು ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ' ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ತಿಳಿಸಿದರು.
ರಾಜ್ಯದ ವಿವಿಧೆಡೆಯಿಂದ ಸಾವಿರ ಮಂದಿ ಸರ್ಕಾರಿ ನೌಕರರು ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಈ ವೇಳೆ ನೂತನ ಪದಾಧಿಕಾರಿಗಳ ಪದಗ್ರಹಣ, ಸಾಧಕ ಸರ್ಕಾರಿ ನೌಕರರಿಗೆ ಸನ್ಮಾನ ನಡೆಯಲಿದೆ' ಎಂದು ಹೇಳಿದರು.
ಈ ವೇಳೆ ಸರ್ಕಾರಿ ನೌಕರರ ಸಂಘದ ಸದಸ್ಯರು ಉಪಸ್ಥಿತರಿದ್ದರು.