ಇಂಡಿಯಾ News

Discover the latest headlines in this section.

ಹೊಸಪೇಟೆ: ಲಾರಿ ಚಾಲಕನ ಅಜಾಗರೂಕತೆಗೆ ಉಸಿರು ಚೆಲ್ಲಿದ ಅಮಾಯಕರು – ಸರಣಿ ಅಪಘಾತದಲ್ಲಿ ನಾಲ್ವರು ಸಾವು

ಹೊಸಪೇಟೆ: ಲಾರಿ ಚಾಲಕನ ಅಜಾಗರೂಕತೆಗೆ ಉಸಿರು ಚೆಲ್ಲಿದ ಅಮಾಯಕರು – ಸರಣಿ ಅಪಘಾತದಲ್ಲಿ ನಾಲ್ವರು ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕನಿಷ್ಠ ನಾಲ್ಕರಿಂದ ಐದು ಮಂದಿ ಅಮಾಯಕರು ಜೀವ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ.ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೆಳ್ಳುಳ್ಳಿ ತುಂಬಿ ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗ ಜಿಲ್ಲೆಯ ಕಡೆಗೆ ಲಾರಿಯೊಂದು ವೇಗವಾಗಿ ಸಾಗುತ್ತಿತ್ತು. ಈ ವೇಳೆ ಹನಮನಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯು ಬೈಕ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಬಳಿಕ ಆತಂಕಿತನಾದ ಚಾಲಕ, ಲಾರಿಯನ್ನು ವೇಗವಾಗಿ ಮುಂದೆ ಚಲಾಯಿಸಿದ್ದಾನೆ. ಡಣಾಯಕನಕೆರೆ ಗ್ರಾಮದ ಬಳಿಯ ಬಿಎಂಎಂ ಕಾರ್ಖಾನೆ ಬಳಿ ತಲುಪಿದಾಗ ಲಾರಿಯು ಬಸ್ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣವಾಗಿ ಫಲ್ಟಿಯಾಗಿ (ತಲೆಕೆಳಗಾಗಿ) ಅಲ್ಲಿದ್ದ ಕಾರಿನ ಮೇಲೆ ಬಿದ್ದು ಪುಡಿಪುಡಿಯಾಗಿದೆ.ಈ ಘಟನೆಯಲ್ಲಿ ಲಾರಿಯ ಕೆಳಗೆ ಸಿಲುಕಿದ ನಾಲ್ಕೈದು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರಲ್ಲಿ ಬೈಕ್ ಸವಾರ ಕೂಡ ಒಬ್ಬನಾಗಿದ್ದಾನೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಎಸ್. ಜಾಹ್ನವಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜೆಸಿಬಿ ಸಹಾಯದಿಂದ ಬಿದ್ದ ಲಾರಿಯನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ.ಸ್ಥಳದಲ್ಲಿ ಲಾರಿ ತೆರವು ಕಾರ್ಯಾಚರಣೆ ವೀಕ್ಷಿಸಲು ತಂಡೋಪತಂಡವಾಗಿ ಜನರು ಜಮಾಯಿಸಿದ್ದು, ನೆರೆದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.ಈ ಘಟನೆ ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Apr 20, 2026 | 05:57 AM
121 0
ಬಸವಣ್ಣನವರ ವಚನಾಮೃತ ಮನುಕುಲಕ್ಕೆ ಮಾದರಿ: ಎಸ್. ಮುನಿರಾಜು

ಬಸವಣ್ಣನವರ ವಚನಾಮೃತ ಮನುಕುಲಕ್ಕೆ ಮಾದರಿ: ಎಸ್. ಮುನಿರಾಜು

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ;' ಯಾವುದೇ ಜಾತಿ, ಧರ್ಮ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನತೆಯ ತತ್ವ ಸಾರಿ ಅಕ್ಷರ ಜ್ಞಾನ, ಅನ್ನ ದಾಸೋಹ, ಆಶ್ರಯ ನೀಡಿದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.ಸಿಡೇದಹಳ್ಳಿಯ ಸರ್ಕಲ್ ನಲ್ಲಿ ಬಸವಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಎಚ್. ರಾಜು ನೇತೃತ್ವದಲ್ಲಿ ಆಯೋಜಿಸಲಾದ ಬಸವ ಜಯಂತಿ ಹಾಗೂ ಸಿದ್ದಗಂಗಾ ಶ್ರೀಗಳ 119ನೇ ಜನ್ಮ ದಿನೋತ್ಸವದಲ್ಲಿ ಮಾತನಾಡಿದರು.ಬಸವಣ್ಣನವರ ವಚನಾಮೃತ ಇಡೀ ಮನುಕುಲಕ್ಕೆ ಮಾದರಿಯಾಗಿದೆ. ಅದರಂತೆ ನಡೆದ ಸಿದ್ದಗಂಗಾ ಶ್ರೀಗಳ ಆದರ್ಶ ವ್ಯಕ್ತಿತ್ವ ಇಂದು ಸಮಾಜಕ್ಕೆ ಮಾದರಿಯಾಗಿದೆ' ಎಂದು ತಿಳಿಸಿದರು.ಅಧ್ಯಕ್ಷ ಪಿ.ಎಚ್. ರಾಜು ಮಾತನಾಡಿ,' ಶ್ರೀಗಳ ಆಶಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೆಳೆದು ಇಂದು ದೇಶ ವಿದೇಶದ ಮೂಲೆ ಮೂಲೆಗಳನ್ನು ನೆಲೆಸಿದ್ದಾರೆ. ಅಂತಹ ಶ್ರೀಗಳ ಜಯಂತೋತ್ಸವ ಇಂದು ಅವರ ಸ್ಮರಣೆಯಲ್ಲಿ ಆಚರಿಸಲಾಗುತ್ತಿದೆ' ಎಂದರು.ಈ ವೇಳೆ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಅನ್ನದಾನ, ಕೋಸಂಬರಿ ವಿತರಿಸಲಾಯಿತು.ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ಅಶ್ವತ್ಥಪ್ಪ, ಸೋಲಾರ್ ಸುಬ್ಬಣ್ಣ, ಎಂ.ಬಿ. ದಯಾನಂದ್, ಸುಜಾತ ಮೇಲೇಗೌಡ, ಕೃಷ್ಣಮೂರ್ತಿ, ಮುರಳಿ, ಚಿಕ್ಕಸಂದ್ರ ಮೋಹನ್, ಲಾರಿ ಮುನಿರಾಜು, ಎಂ. ಬಸವರಾಜು, ರವಿ ಮತ್ತು ಪದಾಧಿಕಾರಿಗಳು ಇದ್ದರು. ವರದಿ: ಪಬ್ಲಿಕ್ ರೈಡ್ ದೇವರಾಜ್

Apr 19, 2026 | 11:40 AM
64 0
ಹಾರ್ಮೋಜ್ ಜಲಸಂಧಿ ಏಪ್ರಿಲ್ 27ರವರೆಗೆ ವಾಣಿಜ್ಯ ಹಡಗುಗಳಿಗೆ ಮುಕ್ತ: ಇರಾನ್ ಐತಿಹಾಸಿಕ ಘೋಷಣೆ

ಹಾರ್ಮೋಜ್ ಜಲಸಂಧಿ ಏಪ್ರಿಲ್ 27ರವರೆಗೆ ವಾಣಿಜ್ಯ ಹಡಗುಗಳಿಗೆ ಮುಕ್ತ: ಇರಾನ್ ಐತಿಹಾಸಿಕ ಘೋಷಣೆ

ಲೆಬನಾನ್-ಇಸ್ರೇಲ್ ತಾತ್ಕಾಲಿಕ ಕದನ ವಿರಾಮದ ಬೆನ್ನಲ್ಲೇ ಇರಾನ್ ಮಹತ್ವದ ನಿರ್ಧಾರ; ಟ್ರಂಪ್ ಸ್ವಾಗತಟೆಹ್ರಾನ್/ವಾಷಿಂಗ್ಟನ್:ಲೆಬನಾನ್ ಮತ್ತು ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮ ಗುರುವಾರ ಜಾರಿಗೊಂಡ ತಕ್ಷಣವೇ ಇರಾನ್ ಶುಕ್ರವಾರ ಅಚ್ಚರಿಯ ಘೋಷಣೆ ಮಾಡಿದೆ. ಹಾರ್ಮೋಜ್ ಜಲಸಂಧಿಯನ್ನು ಏಪ್ರಿಲ್ 27ರವರೆಗೆ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ ಎಂದು ಇರಾನ್ ತಿಳಿಸಿದೆ.ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಈ ಮಾಹಿತಿಯನ್ನು ಪೋಸ್ಟ್ ಮಾಡಿದ್ದಾರೆ. “ಹಾರ್ಮೋಜ್ ಜಲಸಂಧಿಯು ಏಪ್ರಿಲ್ 27ರ ತನಕ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತವಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಈ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಸ್ವಾಗತಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ “ಥ್ಯಾಂಕ್ ಯೂ” ಎಂದು ಸಂಕ್ಷಿಪ್ತವಾಗಿ ಪೋಸ್ಟ್ ಮಾಡಿರುವ ಟ್ರಂಪ್, ಪಶ್ಚಿಮ ಏಷ್ಯಾದ ಸಂಘರ್ಷವು ಶೀಘ್ರವೇ ಕೊನೆಗೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ಲೆಬನಾನ್ ಮತ್ತು ಇಸ್ರೇಲ್ ನಡುವಿನ ತಾತ್ಕಾಲಿಕ ಕದನ ವಿರಾಮವು ಕೇವಲ 10 ದಿನಗಳ ಅವಧಿಗೆ ಮಾತ್ರವಾಗಿದ್ದು, ಗುರುವಾರದಿಂದ ಜಾರಿಯಲ್ಲಿದೆ. ಈ ಕದನ ವಿರಾಮದ ಬೆನ್ನಲ್ಲೇ ಇರಾನ್ ಮಾಡಿರುವ ಹಾರ್ಮೋಜ್ ಜಲಸಂಧಿ ಮುಕ್ತತೆಯ ಘೋಷಣೆಯು ಪ್ರಾದೇಶಿಕ ಸಮುದ್ರ ಮಾರ್ಗಗಳ ಸುರಕ್ಷತೆ ಮತ್ತು ವಾಣಿಜ್ಯ ಸಾಗಾಣಿಕೆಗೆ ಮಹತ್ವದ ಬೆಳವಣಿಗೆಯಾಗಿದೆ.ಹಾರ್ಮೋಜ್ ಜಲಸಂಧಿಯು ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದ್ದು, ಇದರ ಮುಕ್ತತೆಯು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸ್ಥಿರತೆ ತರುವ ನಿರೀಕ್ಷೆಯಿದೆ.**ಸಂಕ್ಷಿಪ್ತ ಸಾರಾಂಶ:**- ಇರಾನ್ ಹಾರ್ಮೋಜ್ ಜಲಸಂಧಿಯನ್ನು ಏಪ್ರಿಲ್ 27ರವರೆಗೆ ಎಲ್ಲಾ ವಾಣಿಜ್ಯ ಹಡಗುಗಳಿಗೆ ಮುಕ್ತಗೊಳಿಸಿದೆ.- ಲೆಬನಾನ್-ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮದ ಬೆನ್ನಲ್ಲೇ ಈ ಘೋಷಣೆ.- ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧಾರ ಸ್ವಾಗತಿಸಿ ‘ಥ್ಯಾಂಕ್ ಯೂ’ ಪೋಸ್ಟ್ ಮಾಡಿದ್ದಾರೆ.- ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳ್ಳುವ ವಿಶ್ವಾಸವನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

Apr 18, 2026 | 06:52 AM
61 0
ಛತ್ರಪತಿ ಸಂಭಾಜಿನಗರದಲ್ಲಿ ಮೊಬೈಲ್ ಕಳವು ಪ್ರಯತ್ನ ವಿರೋಧಿಸಿದ ಯುವಕನ ಮೇಲೆ ಚಾಕು ದಾಳಿ

ಛತ್ರಪತಿ ಸಂಭಾಜಿನಗರದಲ್ಲಿ ಮೊಬೈಲ್ ಕಳವು ಪ್ರಯತ್ನ ವಿರೋಧಿಸಿದ ಯುವಕನ ಮೇಲೆ ಚಾಕು ದಾಳಿ

ಛತ್ರಪತಿ ಸಂಭಾಜಿನಗರ: ನಗರದ API ಕಾರ್ನರ್ ಪ್ರದೇಶದಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ವಿರೋಧಿಸಿದ ಯುವಕನೊಬ್ಬನ ಮೇಲೆ ಕ್ರೂರ ಚಾಕು ದಾಳಿ ನಡೆದಿದೆ. ಈ ಘಟನೆಯಲ್ಲಿ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬಲಿಪಶುವನ್ನು ಕರಣ್ ಜಾಧವ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುರುತಿಸಲಾಗದ ದುಷ್ಕರ್ಮಿಗಳು ಆತನ ಮೊಬೈಲ್ ಫೋನ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದಾಗ ಕರಣ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿಗಳು ತೀಕ್ಷ್ಣವಾದ ಚಾಕುವಿನಿಂದ ಕರಣ್ ಅವರ ಹೊಟ್ಟೆಗೆ ಇರಿತವನ್ನು ಮಾಡಿದ್ದಾರೆ.ತೀವ್ರ ಗಾಯಗೊಂಡ ಕರಣ್ ಅವರನ್ನು ತಕ್ಷಣ ಸ್ಥಳೀಯ MGM ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.ಘಟನೆಯ ಸಂಪೂರ್ಣ ಅನುಕ್ರಮವು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, API ಕಾರ್ನರ್ ಪ್ರದೇಶದಲ್ಲಿ ಸಣ್ಣಪುಟ್ಟ ಕಳವು ಪ್ರಕರಣಗಳು ಸಾಮಾನ್ಯವಾಗಿದ್ದು, ಇದೀಗ ಹಿಂಸಾತ್ಮಕ ಘಟನೆ ನಡೆದಿರುವುದು ಆತಂಕ ಮೂಡಿಸಿದೆ.ಹೆಚ್ಚಿನ ತನಿಖೆ ಮುಂದುವರೆದಿದೆ.

Apr 16, 2026 | 07:19 AM
577 0
ಇಂದು ಬಿಹಾರಕ್ಕೆ ಮೊದಲ ಬಿಜೆಪಿ ಮುಖ್ಯಮಂತ್ರಿ, ಸಿಎಂ ರೇಸ್‌ನಲ್ಲಿ ಸಾಮ್ರಾಟ್‌ ಚೌಧರಿ?

ಇಂದು ಬಿಹಾರಕ್ಕೆ ಮೊದಲ ಬಿಜೆಪಿ ಮುಖ್ಯಮಂತ್ರಿ, ಸಿಎಂ ರೇಸ್‌ನಲ್ಲಿ ಸಾಮ್ರಾಟ್‌ ಚೌಧರಿ?

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಳ್ಳಲಿದ್ದು, ಹಾಲಿ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಸಿಎಂ ರೇಸ್‌ನಲ್ಲಿದ್ದು, ನಿತೀಶ್ ಪುತ್ರ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.ಹಿಂದಿ ಭಾಷಿಕ ಪ್ರದೇಶಗಳ ಪೈಕಿ ಇದುವರೆಗೂ ಬಿಜೆಪಿ ಮುಖ್ಯಮಂತ್ರಿ ಕಾಣದ ಏಕೈಕ ರಾಜ್ಯವಾಗಿದ್ದ ಬಿಹಾರ, ಮಂಗಳವಾರ ಮೊದಲ ಬಿಜೆಪಿ ಮುಖ್ಯಮಂತ್ರಿ ಆಯ್ಕೆಗೆ ಸಾಕ್ಷಿಯಾಗಲಿದೆ. ಹಾಲಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್‌ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಳಿಕ ಸರ್ಕಾರದ ನೇತೃತ್ವವನ್ನು ಬಿಜೆಪಿ ಮೊದಲ ಬಾರಿಗೆ ವಹಿಸಿಕೊಳ್ಳಲಿದೆ. ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

Apr 14, 2026 | 07:17 AM
47 0