ಕರ್ನಾಟಕ News

Discover the latest headlines in this section.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನೂತನ ಮೇಯರ್, ಉಪಮೇಯರ್ ಆಯ್ಕೆ: ಬಿಜೆಪಿಗೆ ಮತ್ತೆ ಅಧಿಕಾರ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನೂತನ ಮೇಯರ್, ಉಪಮೇಯರ್ ಆಯ್ಕೆ: ಬಿಜೆಪಿಗೆ ಮತ್ತೆ ಅಧಿಕಾರ

ಹುಬ್ಬಳ್ಳಿ, ಜು. 4: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು, ಪಾಲಿಕೆಯ ಆಡಳಿತ ಮತ್ತೊಮ್ಮೆ ಬಿಜೆಪಿಯ ಪಾಲಾಗಿದೆ.ನಗರದ ಮಹಾನಗರ ಪಾಲಿಕೆ ಸಭಾಭವನದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮೀಸಲು ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಉಪಮೇಯರ್ ದುರ್ಗಮ್ಮ ಬಿಜವಾಡ ಆಯ್ಕೆಯಾಗಿದ್ದು, ಸಾಮಾನ್ಯ ವರ್ಗದ ಉಪಮೇಯರ್ ಸ್ಥಾನಕ್ಕೆ ರತ್ನಾಭಾಯಿ ನಾಝರೆ ವಿಜಯಶಾಲಿಯಾಗಿದ್ದಾರೆ.24ನೇ ಅವಧಿಯಲ್ಲಿ ಧಾರವಾಡಕ್ಕೆ ಮೇಯರ್ ಸ್ಥಾನ ಲಭಿಸಿದ್ದರೆ, ಈ ಬಾರಿ ಹುಬ್ಬಳ್ಳಿಗೆ ಮೇಯರ್ ಸ್ಥಾನ ದೊರಕಿತ್ತು. ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 69ರ ದುರ್ಗಮ್ಮ ಬಿಜವಾಡ ಹಾಗೂ ಧಾರವಾಡದ ವಾರ್ಡ್ ಸಂಖ್ಯೆ 9ರ ರತ್ನಾಭಾಯಿ ನಾಝರೆ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಪಕ್ಷವು ಮೇಯರ್ ಸ್ಥಾನಕ್ಕೆ ವಾರ್ಡ್ ಸಂಖ್ಯೆ 20ರ ಕವಿತಾ ಕಬ್ಬೇರ್ ಹಾಗೂ ಉಪಮೇಯರ್ ಸ್ಥಾನಕ್ಕೆ ವಾರ್ಡ್ ಸಂಖ್ಯೆ 6ರ ದಿಲ್ಶಾದ್ ಬೇಗಂ ನದಾಫ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿತ್ತು.92 ಸದಸ್ಯ ಬಲ ಹೊಂದಿರುವ ಪಾಲಿಕೆಯಲ್ಲಿ 88 ಸದಸ್ಯರು ಮತದಾನದಲ್ಲಿ ಭಾಗವಹಿಸಿದ್ದು, ನಾಲ್ವರು ಸದಸ್ಯರು ಗೈರಾಗಿದ್ದರು. ಮೇಯರ್ ಸ್ಥಾನಕ್ಕೆ ನಡೆದ ಮತದಾನದಲ್ಲಿ ದುರ್ಗಮ್ಮ ಬಿಜವಾಡ 50 ಮತಗಳನ್ನು ಪಡೆದು ಜಯಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಕವಿತಾ ಕಬ್ಬೇರ್ 32 ಮತಗಳನ್ನು ಪಡೆದರು. ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರತ್ನಾಭಾಯಿ ನಾಝರೆ 50 ಮತಗಳನ್ನು ಪಡೆದು ಆಯ್ಕೆಯಾದರು.ಚುನಾವಣೆಯ ಫಲಿತಾಂಶವನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಕೆ.ಎಂ. ಜಾನಕಿ ಅಧಿಕೃತವಾಗಿ ಘೋಷಿಸಿದರು.ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೇಂದ್ರ ಸಚಿವ ಹಾಗೂ ಸಂಸದ ಪ್ರಲ್ಹಾದ್ ಜೋಶಿ, ರಾಜ್ಯಸಭಾ ಸದಸ್ಯ ಎಂ. ನಾಗರಾಜ್, ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಎಸ್.ವಿ. ಸಂಕನೂರ ಹಾಗೂ ಲಿಂಗರಾಜ ಪಾಟೀಲ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ಎಫ್. ಜಕ್ಕಪ್ಪನವರ ಬೆಂಬಲ ಸೂಚಿಸಿದರು.ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಪಾಲಿಕೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.ಒಂದೇ ಅವಧಿಯಲ್ಲಿ ಉಪಮೇಯರ್ ಹುದ್ದೆಯಿಂದ ಮೇಯರ್ ಸ್ಥಾನಕ್ಕೆ ಏರಿದ ದುರ್ಗಮ್ಮ ಬಿಜವಾಡ ಅವರ ಸಾಧನೆ ವಿಶೇಷವಾಗಿ ಗಮನ ಸೆಳೆದಿದೆ.ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚುವರಿ ಆಯುಕ್ತ ಎಸ್.ಎಸ್. ಬಿರಾದಾರ ಹಾಗೂ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಉಪಸ್ಥಿತರಿದ್ದರು.

Jul 4, 2026 | 11:07 AM
155 0
ಗೃಹಜ್ಯೋತಿ ಫಲಾನುಭವಿಗಳ ದಾಖಲೆ ಪರಿಶೀಲನೆಗೆ ಸಹಕರಿಸಿ: ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ

ಗೃಹಜ್ಯೋತಿ ಫಲಾನುಭವಿಗಳ ದಾಖಲೆ ಪರಿಶೀಲನೆಗೆ ಸಹಕರಿಸಿ: ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ

ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಪರಿಶೀಲನಾ ಕಾರ್ಯ ಆರಂಭವಾಗಿದ್ದು, ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಹೆಸ್ಕಾಂ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ ಮನವಿ ಮಾಡಿದರು.ಜಿಲ್ಲೆಯ ಶಿಗ್ಗಾಂವ ಪಟ್ಟಣದ ಮೆಹಬೂಬ್ ನಗರದಲ್ಲಿ ಗುರುವಾರ ನಡೆಯುತ್ತಿದ್ದ ಗೃಹಜ್ಯೋತಿ ಫಲಾನುಭವಿಗಳ ದಾಖಲೆ ಪರಿಶೀಲನಾ ಕಾರ್ಯವನ್ನು ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗೃಹಜ್ಯೋತಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸುತ್ತಿದ್ದು, ಈ ಯೋಜನೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ಪಡೆದಿದೆ ಎಂದು ಹೇಳಿದರು.ಹೆಸ್ಕಾಂ ವ್ಯಾಪ್ತಿಯಲ್ಲಿ ಜುಲೈ 1ರಿಂದ ಮನೆ-ಮನೆಗೆ ತೆರಳಿ ಫಲಾನುಭವಿಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವಲ್ಲಿ), ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೆಸ್ಕಾಂ ಸಿಬ್ಬಂದಿಗೆ ನೀಡಬೇಕು ಎಂದು ತಿಳಿಸಿದರು.ಮನೆ ಮಾಲೀಕರು ಅಥವಾ ಬಾಡಿಗೆದಾರರಿಂದ ಮಾಹಿತಿ ಪಡೆದು ಸೇವಾ ಸಿಂಧು ತಂತ್ರಾಂಶದಲ್ಲಿ ದಾಖಲು ಮಾಡುವ ಕಾರ್ಯ ನಡೆಯುತ್ತಿರುವುದರಿಂದ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಿಬ್ಬಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಗೃಹಜ್ಯೋತಿ ಯೋಜನೆಯ ದಾಖಲೆ ಪರಿಶೀಲನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ, ಸ್ವತಃ ಒಂದು ಅರ್ಜಿಯನ್ನು ಭರ್ತಿ ಮಾಡಿ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Jul 2, 2026 | 02:32 PM
692 0
ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಹುಬ್ಬಳ್ಳಿ: ನಗರದ ಗುಜರಾತ್ ಭವನದ ಸಮೀಪ ರಾಜಕಾಲುವೆ ಕಾಮಗಾರಿ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.ಮೃತ ಕಾರ್ಮಿಕನನ್ನು ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿ ಮಲ್ಲಪ್ಪ ಜೋಗಿನ್ (41) ಎಂದು ಗುರುತಿಸಲಾಗಿದೆ.ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಗುಂಡಿಯೊಳಗೆ ಇಳಿದು ಮಣ್ಣು ತೆಗೆಯುತ್ತಿದ್ದ ಮಲ್ಲಪ್ಪ ಅವರ ಮೇಲೆ ಏಕಾಏಕಿ ಮಣ್ಣು ಕುಸಿದು ಬಿದ್ದಿದೆ. ಇತ್ತೀಚಿನ ಮಳೆಯಿಂದ ಮಣ್ಣು ನೆನೆದಿದ್ದ ಪರಿಣಾಮ ಗುಂಡಿಯ ಬದಿಯ ಮಣ್ಣು ಜಾರಿದ್ದು, ಮಲ್ಲಪ್ಪ ಮಣ್ಣಿನಡಿ ಸಿಲುಕಿದ್ದಾರೆ.ಸ್ಥಳೀಯರು ಹಾಗೂ ಸಹೋದ್ಯೋಗಿಗಳು ರಕ್ಷಣಾ ಕಾರ್ಯ ನಡೆಸಿ ಅವರನ್ನು ಹೊರತೆಗೆದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಈ ಕಾಮಗಾರಿಯನ್ನು ಮಂಜುನಾಥ ಬೊಮ್ಮಶೆಟ್ಟಿ ಎಂಬ ಗುತ್ತಿಗೆದಾರ ನಡೆಸುತ್ತಿದ್ದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಕಾಮಗಾರಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳಲ್ಲಿ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Jul 2, 2026 | 12:39 PM
35 0
ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ನಡೆದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.ಲಭ್ಯವಾದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲು ಕ್ವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆಯನ್ನು ಟ್ರ್ಯಾಕ್ಟರ್ ಸಹಾಯದಿಂದ ಜರುಗಿಸಲಾಗುತ್ತಿತ್ತು. ಈ ವೇಳೆ ಬಂಡೆ ನಿಯಂತ್ರಣ ತಪ್ಪಿ ಕೆಳಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಬಿಹಾರ ಮೂಲದ ವಲಸೆ ಕಾರ್ಮಿಕರಾಗಿದ್ದು, ದುರಂತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡು ಮೃತದೇಹಗಳನ್ನು ಹೊರತೆಗೆದಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ವಾರಿ ಕಾಮಗಾರಿಯ ಗುತ್ತಿಗೆ ಪಡೆದ ಮೇಸ್ತ್ರಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೇ ಎಂಬ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.ಅಪಘಾತದ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

Jul 2, 2026 | 05:26 AM
121 0
BIS ಪ್ರಮಾಣೀಕೃತ ಉತ್ಪನ್ನಗಳನ್ನೇ ಬಳಸಿ, ಸುರಕ್ಷಿತ ಜೀವನ ನಡೆಸಿ: ಡಾ. ನಾಗರಾಜು ಕೆ.ಸಿ.ಹುರುಳಿಹಳ್ಳಿಯಲ್ಲಿ BIS ವತಿಯಿಂದ SHINE ಜಾಗೃತಿ ಕಾರ್ಯಕ್ರಮ

BIS ಪ್ರಮಾಣೀಕೃತ ಉತ್ಪನ್ನಗಳನ್ನೇ ಬಳಸಿ, ಸುರಕ್ಷಿತ ಜೀವನ ನಡೆಸಿ: ಡಾ. ನಾಗರಾಜು ಕೆ.ಸಿ.ಹುರುಳಿಹಳ್ಳಿಯಲ್ಲಿ BIS ವತಿಯಿಂದ SHINE ಜಾಗೃತಿ ಕಾರ್ಯಕ್ರಮ

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ : ಭಾರತೀಯ ಮಾನಕ ಬ್ಯೂರೋ (BIS), ಬೆಂಗಳೂರು ಶಾಖೆಯ SHINE (Standards Help Inform & Nurture Empowered Women) ಯೋಜನೆಯಡಿ ಜೂನ್ 27, 2026 (ಶನಿವಾರ) ರಂದು ನೆಲಮಂಗಲ ತಾಲ್ಲೂಕಿನ ಹುರುಳಿಹಳ್ಳಿ ಗ್ರಾಮದಲ್ಲಿ ಮಹಿಳೆಯರಿಗಾಗಿ ಗ್ರಾಹಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ  ಆಚಾರ್ಯ ತಾಂತ್ರಿಕ ಮಹಾವಿದ್ಯಾಲಯ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಕೆ ಸಿ, ಮಾತನಾಡಿ "BIS ಪ್ರಮಾಣೀಕೃತ ಉತ್ಪನ್ನಗಳನ್ನೇ ಬಳಸಿ, ಸುರಕ್ಷಿತ ಜೀವನ ನಡೆಸಿ" ಎಂದು ಕರೆ ನೀಡಿದರು. ಅವರು ಭಾರತೀಯ ಮಾನಕ ಬ್ಯೂರೋ (BIS) ಕಾರ್ಯಚಟುವಟಿಕೆಗಳು, ISI ಗುರುತು, ಹಾಲ್‌ಮಾರ್ಕ್, BIS CARE ಆ್ಯಪ್, ಕಡ್ಡಾಯ BIS ಪ್ರಮಾಣೀಕರಣ ಹೊಂದಿರುವ ಉತ್ಪನ್ನಗಳು, ಗುಣಮಟ್ಟದ ಉತ್ಪನ್ನಗಳ ಆಯ್ಕೆ, ಗ್ರಾಹಕರ ಹಕ್ಕುಗಳು ಹಾಗೂ ಸುರಕ್ಷಿತ ಖರೀದಿಯ ಮಹತ್ವದ ಕುರಿತು ಮಹಿಳೆಯರಿಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಅಧ್ಯಕ್ಷ ಶ್ರೀ ರಾಮು ಹುರುಳಿಹಳ್ಳಿ ಉಪಸ್ಥಿತರಿದ್ದು, ಗ್ರಾಹಕರ ಜಾಗೃತಿ ಮತ್ತು ಗುಣಮಟ್ಟದ ಉತ್ಪನ್ನಗಳ ಬಳಕೆಯ ಅಗತ್ಯತೆಯ ಕುರಿತು ಮಾತನಾಡಿದರು.ಶ್ರೀ ವರಲಕ್ಷ್ಮಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಪಂಕಜ ಅವರ ನೇತೃತ್ವದಲ್ಲಿ 25 ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ BIS ಪ್ರಮಾಣೀಕರಣ, ISI ಗುರುತುಗಳನ್ನು ಗುರುತಿಸುವ ವಿಧಾನ, BIS CARE ಆ್ಯಪ್ ಬಳಕೆ ಹಾಗೂ ಗ್ರಾಹಕರ ಸುರಕ್ಷತೆಯ ಕುರಿತು ಮಾಹಿತಿ ಪಡೆದುಕೊಂಡರು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ISI ಗುರುತುಗಳ ಮಾಹಿತಿ ಹೊಂದಿರುವ ಜಾಗೃತಿ ಕಿಟ್‌ಗಳನ್ನು ವಿತರಿಸಲಾಯಿತು.ಗುಣಮಟ್ಟದ ಉತ್ಪನ್ನಗಳ ಬಳಕೆ, ಮಹಿಳಾ ಸಬಲೀಕರಣ ಹಾಗೂ ಸುರಕ್ಷಿತ ಗ್ರಾಹಕ ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಭಾಗವಹಿಸಿದ ಮಹಿಳೆಯರು ಹಾಗೂ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.ವರದಿ : ಪಬ್ಲಿಕ್ ರೈಡ್ ದೇವರಾಜ್

Jul 1, 2026 | 08:25 AM
107 0
ಹುಬ್ಬಳ್ಳಿ: ಗದಿಗೆಪ್ಪಗೌಡರ್ ವಿರುದ್ಧ ಜಾತಿ ನಿಂದನೆ ಆರೋಪ; ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ಗದಿಗೆಪ್ಪಗೌಡರ್ ವಿರುದ್ಧ ಜಾತಿ ನಿಂದನೆ ಆರೋಪ; ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ಜಾತಿ ನಿಂದನೆ ಮಾಡಿದ್ದು ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಗಿರೀಶ್ ಗದಿಗೆಪ್ಪಗೌಡರ್ ಹಾಗೂ ಹರ್ಷ ಎಂಬುವರ ವಿರುದ್ಧ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಳೇ ಹುಬ್ಬಳ್ಳಿಯ ನಿವಾಸಿ ವಿನಾಯಕ ಜಕ್ಕನೂರು ಅವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.ದೂರಿನ ಪ್ರಕಾರ, ಸುಮಾರು ಆರು ತಿಂಗಳ ಹಿಂದೆ ಕೇಶ್ವಾಪುರ ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತದ ವಿಚಾರವಾಗಿ ದೂರುದಾರ ಹಾಗೂ ಆರೋಪಿತರ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಇತ್ತೀಚೆಗೆ ವಿನಾಯಕ ಜಕ್ಕನೂರು ಅವರು ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿರುವ ಸಲೂನ್‌ಗೆ ತೆರಳಿದ್ದ ವೇಳೆ ಆರೋಪಿತರು ಅವರನ್ನು ಗುರಾಯಿಸಿ ನೋಡಿದ್ದಲ್ಲದೆ, ಜಾತಿ ಹೆಸರನ್ನು ಉಲ್ಲೇಖಿಸಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಅಲ್ಲದೆ, "ನನ್ನ ಬಳಿ ಎರಡು ಗನ್‌ಗಳಿವೆ" ಎಂದು ಹೇಳಿ ಜೀವ ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ಧ ಸಂಬಂಧಿತ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Jun 28, 2026 | 04:23 AM
139 0
ಮೊಹರಂ ಹಿಂದೂ ಹಾಗೂ ಮುಸ್ಲಿಂ ಬಾಂಧವರ ಬಾವೈಕತೆಗೆ ಭದ್ರ ಬುನಾದಿಯಾಗಲಿ- ಬ.ನಾ.ರವಿ

ಮೊಹರಂ ಹಿಂದೂ ಹಾಗೂ ಮುಸ್ಲಿಂ ಬಾಂಧವರ ಬಾವೈಕತೆಗೆ ಭದ್ರ ಬುನಾದಿಯಾಗಲಿ- ಬ.ನಾ.ರವಿ

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ : ಮೊಹರಂ ಹಬ್ಬ ಹಿಂದೂ ಮತ್ತು ಮುಸ್ಲಿಮರು ಯಾವುದೇ ಭೇದಭಾವವಿಲ್ಲದೆ ಅತ್ಯಂತ ಸಡಗರದಿಂದ ಹಾಗೂ ಭಾವೈಕ್ಯತೆಯ ಸಂಕೇತವಾಗಿ ಆಚರಿಸಲಾಗುತ್ತದೆ ಎಂದುಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ,ಹಾಗೂ ಹೆಗ್ಗನಹಳ್ಳಿ ಕಾಂಗ್ರೆಸ್ ಜಿಬಿಎ ಆಕಾಂಕ್ಷಿ  ಬ.ನಾ.ರವಿ ತಿಳಿಸಿದರು.ದಾಸರಹಳ್ಳಿ ವಿ.ಕ್ಷೇತ್ರದ ಹೆಗ್ಗನಹಳ್ಳಿಯಲ್ಲಿಮುಸ್ಲಿಂ ಬಾಂಧವರು ಅಯೋಜಿಸಲಾಗಿದ್ದ ಮೊಹರಂ ಆಚರಣೆಯಲ್ಲಿ ಹೆಗ್ಗನಹಳ್ಳಿ ಕಾಂಗ್ರೆಸ್‌ ಮುಖಂಡ ಬ.ನಾ.ರವಿ ರವರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಮುಸ್ಲಿಂ ಗುರುಗಳ ಅರ್ಶೀವಾದ ಪಡೆದರು.ತ್ಯಾಗ ಬಲಿದಾನ ಮತ್ತು ಇತಿಹಾಸದ ಮಹತ್ವವನ್ನು ಸಾರುವ ಮೊಹರಂ ಹಬ್ಬ ಈ ತಿಂಗಳಲ್ಲಿ ಧಾರ್ಮಿಕ ಆಚರಣೆ ಇದಾಗಿದ್ದು ಹಿಂದೂ ಹಾಗೂ ಮುಸ್ಲಿಂ ಬಾಂಧವರ ಬಾವೈಕತೆಗೆ ಭದ್ರ ಬುನಾದಿಯಾಗಲಿ ಎಂದು ಶುಭಕೋರಿದರು.ಈ ಸಂಧರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಎ.ವಿ ರಂಗರಾಜ್,ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಮೈಕಲ್ ಬಾಬು ,ಪಶ್ಚಿಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಾಜು. ಉಮೇಶ್ ಹೈದರಾಲಿ,ಮುನ್ನ ,ಶಪೀ, ಆಲಿ ಇದ್ದರು.ವರದಿ : ಪಬ್ಲಿಕ್ ರೈಡ್ ದೇವರಾಜ್

Jun 26, 2026 | 12:54 PM
90 0
ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ

ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ ಸಮೀಪದ ವಿಡಿಯಾ ಸ್ಕೂಲ್ ಬಸ್ ನಿಲ್ದಾಣದ ಹತ್ತಿರ ಕ್ಷೇತ್ರದ ಬಿಜೆಪಿ ವತಿಯಿಂದ ಶಾಸಕ ಎಸ್. ಮುನಿರಾಜು ಅವರ ನೇತೃತ್ವದಲ್ಲಿ ತುರ್ತುಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಪಕ್ಷ ದೇಶದ ಪರ ಧ್ವನಿ ಎತ್ತಿದ ಲಕ್ಷಾಂತರ ಜನರನ್ನು ಜೈಲಿಗೆ ತಳ್ಳಿ ವಿಕೃತಿ ಮೆರೆಯಲಾಗಿತ್ತು. ಇಂತಹ ಅಸಂವಿಧಾನಿಕವಾಗಿ ತುರ್ತು ಪರಿಸ್ಥಿತಿ ಹೇರಿದ ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ಮತ್ತುಕಾಂಗ್ರೆಸ್‌ನ ಈ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ರಾಷ್ಟ್ರದ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಇಟ್ಟ ದಿನ, ಸಂವಿಧಾನ ಹತ್ಯಾದಿವಸ್ ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸೋಮಶೇಖರ್, ಸುಜಾತ ಮುನಿರಾಜು, ಉಮಾದೇವಿ ನಾಗರಾಜು, ಬಿ.ಎಂ. ನಾರಾಯಣ್, ಬಿ.ಎಸ್. ಅನಿಲ್ ಕುಮಾರ್, ಭರತ್ ಸೌಂದರ್ಯ, ಟಿ. ಶಿವಕುಮಾರ್, ಗುರುಪ್ರಸಾದ್, ವಿನೋದ್ ಗೌಡ, ಮುರಳಿ ಮುಂತಾದವರಿದ್ದರು.ವರದಿ : ಪಬ್ಲಿಕ್ ರೈಡ್ ದೇವರಾಜ್

Jun 25, 2026 | 04:08 PM
28 0
ಅಂತರರಾಷ್ಟ್ರೀಯ ಮಾದಕ ದ್ರವ್ಯ ದಿನಾಚರಣೆ: ಧಾರವಾಡ ಜಿಲ್ಲೆಯಲ್ಲಿ 49.950 ಕೆ.ಜಿ. ಗಾಂಜಾ ನಾಶ

ಅಂತರರಾಷ್ಟ್ರೀಯ ಮಾದಕ ದ್ರವ್ಯ ದಿನಾಚರಣೆ: ಧಾರವಾಡ ಜಿಲ್ಲೆಯಲ್ಲಿ 49.950 ಕೆ.ಜಿ. ಗಾಂಜಾ ನಾಶ

ಧಾರವಾಡ, ಜೂ.25: ಅಂತರರಾಷ್ಟ್ರೀಯ ಮಾದಕ ದ್ರವ್ಯ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲಾ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಪಡಿಸಿದ್ದ ಸುಮಾರು 49 ಕೆ.ಜಿ. 950 ಗ್ರಾಂ ಗಾಂಜಾವನ್ನು ಗುರುವಾರ ನಾಶಪಡಿಸಿದರು.ಪ್ರಧಾನ ಕಚೇರಿ ಬೆಂಗಳೂರು ನಿರ್ದೇಶನದಂತೆ, ಎನ್‌ಡಿಪಿಎಸ್ (NDPS) ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಜಪ್ತಗೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ರಚಿಸಲಾದ “ಡ್ರಗ್ ಡಿಸ್ಪೋಸಲ್ ಕಮಿಟಿ” ಸಭೆ ಜೂನ್ 17ರಂದು ನಡೆದಿದ್ದು, ಜಪ್ತ ವಸ್ತುಗಳನ್ನು ನಾಶಪಡಿಸಲು ತೀರ್ಮಾನಿಸಲಾಗಿತ್ತು.ಅದರಂತೆ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2025 ಹಾಗೂ 2026ನೇ ಸಾಲಿನಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಮೂರು ಪ್ರಕರಣಗಳಲ್ಲಿ ಜಪ್ತಗೊಂಡಿದ್ದ ಗಾಂಜಾವನ್ನು (ಮಾದರಿ ಪರೀಕ್ಷೆಗಾಗಿ ಉಳಿಸಿಕೊಂಡ ಪ್ರಮಾಣ ಹೊರತುಪಡಿಸಿ) ನಾಶಪಡಿಸಲಾಯಿತು.ಹುಬ್ಬಳ್ಳಿ ತಾಲೂಕಿನ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ M/s Rio Green India Ltd (CBMWTF) ಘಟಕದಲ್ಲಿ ಗಾಂಜಾವನ್ನು ಸುಟ್ಟು ನಾಶಪಡಿಸಲಾಯಿತು.ಈ ವೇಳೆ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಧಾರವಾಡ ಗ್ರಾಮೀಣ ಉಪವಿಭಾಗದ ಡಿಎಸ್‌ಪಿ ವಿನೋದ ಮುಕ್ತೆದಾರ, ನವಲಗುಂದ ವೃತ್ತದ ಸಿಪಿಐ ರವಿ ಕಪ್ಪತ್ತನವರ ಸೇರಿದಂತೆ ಡ್ರಗ್ ಡಿಸ್ಪೋಸಲ್ ಸಮಿತಿಯ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಸಮಾಜವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಹಾಗೂ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Jun 25, 2026 | 02:40 PM
120 0
ಸೈಕಲ್‌ನಲ್ಲೇ ಕೃಷಿ ಕ್ರಾಂತಿ: ಕಡಿಮೆ ವೆಚ್ಚದಲ್ಲಿ ಕಳೆ ನಿಯಂತ್ರಣಕ್ಕೆ ರೈತನ ಹೊಸ ತಂತ್ರ

ಸೈಕಲ್‌ನಲ್ಲೇ ಕೃಷಿ ಕ್ರಾಂತಿ: ಕಡಿಮೆ ವೆಚ್ಚದಲ್ಲಿ ಕಳೆ ನಿಯಂತ್ರಣಕ್ಕೆ ರೈತನ ಹೊಸ ತಂತ್ರ

ದಾವಣಗೆರೆ: ಕೃಷಿ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ತಮ್ಮ ಚಾತುರ್ಯದಿಂದ ಹೊಸ ಕೃಷಿ ತಂತ್ರಜ್ಞಾನವನ್ನು ಪರಿಚಯಿಸಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಬಳಕೆಯಲ್ಲಿರದ ಹಳೆಯ ಸೈಕಲ್‌ಗೆ ಎಡೆಕುಂಟೆ ಅಳವಡಿಸಿ ಮೆಕ್ಕೆಜೋಳದ ಹೊಲದಲ್ಲಿ ಕಳೆ ತೆಗೆಯುವ ಕಾರ್ಯ ನಡೆಸುತ್ತಿದ್ದಾರೆ.ಎತ್ತುಗಳ ಕೊರತೆ, ಬಾಡಿಗೆ ದರದ ಏರಿಕೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಬೇಕಾಗುವ ಡೀಸೆಲ್ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಮೆಕ್ಕೆಜೋಳದ ಸಾಲುಗಳ ನಡುವೆ ಸೈಕಲ್ ಆಧಾರಿತ ಕುಂಟೆಯನ್ನು ಚಲಾಯಿಸುವ ಮೂಲಕ ಸುಲಭವಾಗಿ ಕಳೆ ನಿಯಂತ್ರಣ ಮಾಡುತ್ತಿದ್ದಾರೆ.ಈ ವಿಧಾನದಿಂದ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಬಹುದು. ಅಲ್ಲದೆ ಸಣ್ಣ ಮತ್ತು ಅಲ್ಪಭೂಧಾರಕ ರೈತರಿಗೆ ಇದು ಉತ್ತಮ ಪರ್ಯಾಯವಾಗಬಹುದು ಎಂದು ಸಂಜೀವಪ್ಪ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.ರೈತನ ಈ ವಿನೂತನ ಆವಿಷ್ಕಾರ ಇದೀಗ ಸುತ್ತಮುತ್ತಲಿನ ರೈತರ ಮೆಚ್ಚುಗೆಗೆ ಪಾತ್ರವಾಗಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನಕ್ಕೆ ಮಾದರಿಯಾಗಿದೆ. ಕೃಷಿಯಲ್ಲಿ ಹೊಸ ಆಲೋಚನೆಗಳು ಹಾಗೂ ಸ್ಥಳೀಯ ಸಂಪನ್ಮೂಲಗಳ ಸದುಪಯೋಗದಿಂದಲೂ ಉತ್ತಮ ಫಲಿತಾಂಶ ಪಡೆಯಬಹುದು ಎಂಬುದನ್ನು ಈ ರೈತ ದಂಪತಿ ಸಾಬೀತುಪಡಿಸಿದ್ದಾರೆ.

Jun 24, 2026 | 07:10 AM
226 0
ನೆಲಗೆದರನಹಳ್ಳಿ ವಾರ್ಡ್ ಜಿಬಿಎ ಆಕಾಂಕ್ಷಿ,ಕೆ ಅರ್ ಎಸ್ ಪಕ್ಷದ ಕಾರ್ಯದರ್ಶಿಬಿ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿದ ಗಣ್ಯರು.

ನೆಲಗೆದರನಹಳ್ಳಿ ವಾರ್ಡ್ ಜಿಬಿಎ ಆಕಾಂಕ್ಷಿ,ಕೆ ಅರ್ ಎಸ್ ಪಕ್ಷದ ಕಾರ್ಯದರ್ಶಿಬಿ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿದ ಗಣ್ಯರು.

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ : ಕರ್ನಾಟಕ ರಾಷ್ಟ್ರ ಸಮಿತಿ (ಕೆ ಅರ್ಎಸ್) ಪಾರ್ಟಿಯ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ, ಬೆ.ಉತ್ತರ ಜಿಲ್ಲೆಯ 2024ರ ಲೋಕಸಭಾ ಆಭ್ಯರ್ಥಿ ,ಸಮಾಜ ಸೇವಕರು ಹಾಗೂ ದಾಸರಹಳ್ಳಿ ಕ್ಷೇತ್ರದ ನೆಲಗೆದರನಹಳ್ಳಿ ವಾರ್ಡ್ ಜಿಬಿಎ ಆಕಾಂಕ್ಷಿ ಶಿವಕುಮಾರ್ ಬಿ ರವರ ಜನ್ಮದಿನವನ್ನು ಅಭಿಮಾನಿಗಳು ಸ್ನೇಹಿತರ ಬಳಗ ಅದ್ದೂರಿಯಾಗಿ ಆಚರಿಸಿದರು.ಈ ವೇಳೆ ಕೆ ಅರ್ ಎಸ್ ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣಾರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ದೀಪಕ್, ವೀರಶೈವ ಮುಖಂಡ, ಹೆಚ್ ಎಂ ಟಿ ಲೇಔಟ್ ಸ್ನೇಹ ಜೀವಿ ಬಳಗದ ಅಧ್ಯಕ್ಷ ಎಂ ಕೆ ಜಗದೀಶ್,ಮುಖಂಡರಾದ ಸತೀಶ್ ಆರಾಧ್ಯ,ನಾಗಸಂದ್ರ ನಾಗೇಶ್,ಹರೀಶ್,ಶಿವಣ್ಣ ಮಣಿ ಓಂಕಾರ್ ,ಕುಟುಂಬಸ್ಥರಾದ ಪತ್ನಿ ಲತಾ, ಮಕ್ಕಳಾದ ಲಾವಣ್ಯ,ಸ್ವಾತಿ, ಮತ್ತಿತರ ಗಣ್ಯರು ಭಾಗವಹಿಸಿ ಶಾಲು ಹೊದಿಸಿ,ಮೈಸೂರು ಪೇಟ ತೊಡಿಸಿ ಕೇಕ್ ಕತ್ತರಿಸಿ ಸಿಹಿ ತಿನ್ನಿಸಿ ಹುಟ್ಟುಹಬ್ಬಕ್ಕೆ ಶುಭಕೋರಿದರುವರದಿ : ಪಬ್ಲಿಕ್ ರೈಡ್ ದೇವರಾಜ್

Jun 22, 2026 | 04:06 AM
86 0
ಹುಬ್ಬಳ್ಳಿ ಪೂರ್ವ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಲು ವ್ಯಾಪಾರಿಗಳ ಆಗ್ರಹ

ಹುಬ್ಬಳ್ಳಿ ಪೂರ್ವ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಲು ವ್ಯಾಪಾರಿಗಳ ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ನಗರದ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.ನಗರದ ಜವಳಿಸಾಲ ಹಿರೇಪೇಟೆ ವೃತ್ತದಲ್ಲಿ ನಡೆದ ಸಮೂಹ ವರ್ತಕರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಹುಬ್ಬಳ್ಳಿ ಪೂರ್ವ ಕ್ಷೇತ್ರದಿಂದ ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ದಾಖಲಿಸಿರುವುದಲ್ಲದೆ, ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಅವರಂತಹ ಅನುಭವಿಗಳಾದ ನಾಯಕರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.ಈ ಭಾಗಕ್ಕೆ ಸಚಿವ ಸ್ಥಾನ ದೊರೆತಲ್ಲಿ ಸರ್ಕಾರದ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ ಎಂದು ವ್ಯಾಪಾರಿಗಳು ತಿಳಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ತಾರಾದೇವಿ ವಾಲಿ, ವಿಜಯಕುಮಾರ್ ಅಳಗುಂಡಗಿ, ಚಂದ್ರಶೇಖರ ಅಳಗುಂಡಗಿ, ಅನ್ವರ ಮುಧೋಳ, ಮೋಹನ ಸವಣೂರ, ಗೌತಮ ಜೈನ್, ಗೋವಿಂದ ಶರ್ಮಾ, ತೇಜಾರಾಮ್ ಪಾಟೀಲ್, ನರೇಂದ್ರ ಜೈನ್, ಲಲಿತ ಜೈನ್ ಹಾಗೂ ಪತ್ರಕರ್ತ ಜಗದೀಶ್ ಬುರ್ಲಬುಡ್ಡಿ ಸೇರಿದಂತೆ ವರ್ತಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Jun 20, 2026 | 07:55 AM
40 0