ಕರ್ನಾಟಕ News

Discover the latest headlines in this section.

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ; ವ್ಯಕ್ತಿ ಸಾವು ಇಬ್ಬರು ಆರೋಪಿಗಳ ಬಂಧನ

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ; ವ್ಯಕ್ತಿ ಸಾವು ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಒಬ್ಬ ವ್ಯಕ್ತಿಯ ಸಾವಿನಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರಿನ ಯಶವಂತಪುರ ಭಾಗದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.ಕೊಪ್ಪಳ ಮೂಲದ ಶರಣಪ್ಪ (36) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಶರಣಪ್ಪ ಹಾಗೂ ಆತನ ಸ್ನೇಹಿತರಾದ ಆನಂದ್ ಮತ್ತು ದಕ್ಷಿಣಾಮೂರ್ತಿ ನಡುವೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಗಿತ್ತು.ಮೇ 10ರಂದು ಯಶವಂತಪುರದ ಗೋವರ್ಧನ್ ಟಾಕೀಸ್ ಸಮೀಪದ ಬಾರ್ ಒಂದರಲ್ಲಿ ಮೂವರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಬಾರ್ ಹೊರಗಡೆಯೂ ಗಲಾಟೆ ಮುಂದುವರಿದಿತ್ತು. ಈ ವೇಳೆ ಆನಂದ್ ಹಾಗೂ ದಕ್ಷಿಣಾಮೂರ್ತಿ ಶರಣಪ್ಪಗೆ ಡಿಚ್ಚಿ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಘಟನೆಯ ಬಳಿಕ ಮೂವರೂ ಒಂದೇ ಶೆಡ್‌ಗೆ ತೆರಳಿ ಮಲಗಿದ್ದರು. ಆದರೆ ಶರಣಪ್ಪ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸ್ವಗ್ರಾಮ ಕೊಪ್ಪಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶರಣಪ್ಪ ಮೃತಪಟ್ಟಿದ್ದಾರೆ.ಈ ಸಂಬಂಧ ಆರಂಭದಲ್ಲಿ ಕೊಪ್ಪಳದಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ಪ್ರಕರಣವನ್ನು ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಾದ ಆನಂದ್ ಮತ್ತು ದಕ್ಷಿಣಾಮೂರ್ತಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

May 17, 2026 | 05:57 AM
44 0
ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ

ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ

ಹುಬ್ಬಳ್ಳಿ: ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ರೌಡಿಶೀಟರ್‌ಗಳು, MOB ಆರೋಪಿಗಳು ಹಾಗೂ NDPS ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಹುಬ್ಬಳ್ಳಿ-ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.ವಿದ್ಯಾಗಿರಿ ಪೊಲೀಸ್ ಠಾಣೆ, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯಿತು.ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರೌಡಿಶೀಟರ್‌ಗಳು, MOB ಗಳು, NDPS ಆರೋಪಿಗಳು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದವರನ್ನು ಗುರುತಿಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಧಾರವಾಡ ಮತ್ತು ಹುಬ್ಬಳ್ಳಿ ದಕ್ಷಿಣ ಉಪವಿಭಾಗಗಳ ACP ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ನಗರದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಸಮಾಜವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

May 16, 2026 | 03:40 AM
88 0
ಪುಸ್ತಕದ ಚಳುವಳಿ ಜ್ಞಾನದ ಚಳುವಳಿ :ಡಾ. ಸಿ ಸೋಮಶೇಖರ್

ಪುಸ್ತಕದ ಚಳುವಳಿ ಜ್ಞಾನದ ಚಳುವಳಿ :ಡಾ. ಸಿ ಸೋಮಶೇಖರ್

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ:' ಪುಸ್ತಕದ ಚಳುವಳಿ ಜ್ಞಾನದ ಚಳುವಳಿ, ಜ್ಞಾನ ವಿಸ್ತಾರವಾದರೆ ಅಲ್ಲಿ ಹಿಂಸೆ, ಕ್ರೌರ್ಯ ಇರುವುದಿಲ್ಲ' ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ ಸೋಮಶೇಖರ್ ತಿಳಿಸಿದರು.ಶೆಟ್ಟಿಹಳ್ಳಿಯ ಶಾಸಕ ಎಸ್. ಮುನಿರಾಜು ಅವರ ಕಚೇರಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ದಾಸರಹಳ್ಳಿ ಕ್ಷೇತ್ರ ಕಸಾಪ ಸಹಯೋಗದೊಂದಿಗೆ 'ಮನೆಗೊಂದು ಗ್ರಂಥಾಲಯ ಅನುಷ್ಠಾನ' ಸಮಾರಂಭ ಉದ್ಘಾಟಿಸಿ ಮಾತನಾಡಿದರು.' ಪುಸ್ತಕಗಳು ನಮ್ಮ ಮನೆಯ ದೊಡ್ಡ ಆಸ್ತಿ. ಅವುಗಳನ್ನು ಜೋಪಾನ ಮಾಡಬೇಕು. ಶರಣರ, ವಚನಕಾರರ, ಜಾನಪದರ ಪದ್ಯದ ಪುಸ್ತಕಗಳು ಮಾನವೀಯತೆಯ ಮೌಲ್ಯಾಧಾರಿತವಾದವುಗಳು' ಎಂದರು.ಹಿಂದಿನ ಕಾಲದಲ್ಲಿ ಅನಕ್ಷರತೆ ಜಾಸ್ತಿ ಇತ್ತು. ಇಂದು ಎಲ್ಲರೂ ಅಕ್ಷರಸ್ಥರಾಗಿದ್ದಾರೆ, ಬುದ್ದಿವಂತರಾಗಿದ್ದಾರೆ ಹಾಗೆಯೇ ಪುಸ್ತಕ ಜ್ಞಾನವನ್ನು ಪಡೆಯಬೇಕು'ಎಂದು ಸಲಹೆ ನೀಡಿದರು.ಶಾಸಕ ಎಸ್. ಮುನಿರಾಜು ಮಾತನಾಡಿ,' ಪೋಷಕರು ತಮ್ಮ ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕಗಳನ್ನು ನೀಡಿ ಪುಸ್ತಕ ಓದುವುದರಿಂದ ಜ್ಞಾನಾರ್ಜನೆ ಪಡೆಯಬಹುದು. ನಮ್ಮ ಕ್ಷೇತ್ರದಲ್ಲಿ ಕೂಡ ಅನೇಕ ಹಿರಿಯ ಸಾಹಿತಿಗಳು ಇದ್ದಾರೆ' ಎಂದು ತಿಳಿಸಿದರು.ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಪ್ರಕಾಶ್ ಮೂರ್ತಿ ಮಾತನಾಡಿ,' ಒಂದು ಮನೆಗೆ ಪೂಜಾಲಯ ಎಷ್ಟು ಮುಖ್ಯ ಹಾಗೆಯೇ ಗ್ರಂಥಾಲಯ ಕೂಡ ಅಷ್ಟೇ ಮುಖ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರು ಕೂಡ ಅನೇಕ ಪುಸ್ತಕಗಳನ್ನು ಓದಿ ದೇಶವಿದೇಶಗಳ ಸ್ಥಿತಿಗತಿಗಳನ್ನು ತಿಳಿದಿದ್ದರು' ಎಂದು ಅಭಿಪ್ರಾಯಪಟ್ಟರು.ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ, ಸುರೇಶ್ ಮುಂತಾದವರಿದ್ದರು.  ವರದಿ : ಪಬ್ಲಿಕ್ ರೈಡ್ ದೇವರಾಜ್

May 13, 2026 | 01:43 PM
28 0
ಕಂದಕಕ್ಕೆ ಉರುಳಿದ ಡಾಂಬರ್ ಮಷಿನ್‌; ಆಪರೇಟರ್ ಸ್ಥಳದಲ್ಲೇ ಸಾವು

ಕಂದಕಕ್ಕೆ ಉರುಳಿದ ಡಾಂಬರ್ ಮಷಿನ್‌; ಆಪರೇಟರ್ ಸ್ಥಳದಲ್ಲೇ ಸಾವು

ಬಾಗಲಕೋಟೆ:ಟ್ರ್ಯಾಕ್ಟರ್ ಟ್ರೈಲರ್‌ನಲ್ಲಿ ಸಾಗಿಸಲಾಗುತ್ತಿದ್ದ ಡಾಂಬರ್ ಮಷಿನ್‌ ಹೆದ್ದಾರಿ ಪಕ್ಕದ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ, ಮಷಿನ್‌ ಆಪರೇಟರ್ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರ ಹೊರವಲಯದಲ್ಲಿ ನಡೆದಿದೆ.ನಗರದ ಕಟ್ಟೆ ಕೆರೆ ಸಮೀಪ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಟ್ರೈಲರ್‌ನಲ್ಲಿ ಡಾಂಬರ್ ಮಷಿನ್‌ ಅನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್‌ ಸಮೇತ ಮಷಿನ್‌ ಸುಮಾರು 30 ಅಡಿ ಆಳದ ಕಂದಕಕ್ಕೆ ಉರುಳಿದೆ.ಅಪಘಾತದ ತೀವ್ರತೆಗೆ ಮಷಿನ್‌ ಆಪರೇಟರ್ ಬಂದೆ ನವಾಜ್ ಶೇಕ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ವಿಜಯಪುರ ಜಿಲ್ಲೆಯ ಸಿರನಾಳ ಗ್ರಾಮದ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಲು ಹರಸಾಹಸ ಪಟ್ಟರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.ಅಪಘಾತ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

May 13, 2026 | 09:24 AM
15 0
24 ಗಂಟೆಯಲ್ಲಿ 29 ಲಕ್ಷ ಮೌಲ್ಯದ ಎರಡು ಕಾರು ಪತ್ತೆ: ಎಪಿಎಂಸಿ ಪೊಲೀಸರ ಚುರುಕು ಕಾರ್ಯಾಚರಣೆ

24 ಗಂಟೆಯಲ್ಲಿ 29 ಲಕ್ಷ ಮೌಲ್ಯದ ಎರಡು ಕಾರು ಪತ್ತೆ: ಎಪಿಎಂಸಿ ಪೊಲೀಸರ ಚುರುಕು ಕಾರ್ಯಾಚರಣೆ

ಬೆಳಗಾವಿ: ಮನೆ ಅಂಗಳದಲ್ಲಿ ನಿಲ್ಲಿಸಲಾಗಿದ್ದ ದುಬಾರಿ ಕಾರು ಕಳ್ಳತನ ಪ್ರಕರಣವನ್ನು ಬೆಳಗಾವಿ ನಗರದ ಎಪಿಎಂಸಿ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ, ಸುಮಾರು ₹29 ಲಕ್ಷ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.ಹನುಮಾನನಗರ ನಿವಾಸಿ ಪ್ರಿಯಾಂಕಾ ಚೇತನ ಅಜರೇಕರ ಅವರಿಗೆ ಸೇರಿದ ಕಿಯಾ ಕಂಪನಿಯ ಕಾರು (ಕೆಎ-22 ಎಂಸಿ 8122) ದಿ.10ರಂದು ಮನೆಯ ಮುಂದೆ ನಿಲ್ಲಿಸಿದ್ದ ವೇಳೆ ಕಳ್ಳತನವಾಗಿತ್ತು. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಪಿಎಂಸಿ ಪೊಲೀಸರು, ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದರು. ಪಿಐ ಯು.ಎಸ್. ಆವಟಿ ನೇತೃತ್ವದ ತಂಡವು ತಾಂತ್ರಿಕ ಮಾಹಿತಿ ಹಾಗೂ ಜಾಡು ಹಿಡಿದು ಮಹಾರಾಷ್ಟ್ರದ ಮುಂಬೈವರೆಗೆ ತೆರಳಿ ಕಾರ್ಯಾಚರಣೆ ನಡೆಸಿ ಕಳ್ಳತನವಾದ ಕಾರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು.ತನಿಖೆ ವೇಳೆ ಧಾರವಾಡ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಹ್ಯೂಂಡೈ ಕಂಪನಿಯ ಮತ್ತೊಂದು ಕಾರು ಸಹ ಪತ್ತೆಯಾಗಿದ್ದು, ಎರಡೂ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆದರೆ ಕಾರುಗಳನ್ನು ಕಳ್ಳತನ ಮಾಡಿದ್ದ ಆರೋಪಿತರು ವಾಹನಗಳನ್ನು ಬಿಟ್ಟು ಪರಾರಿಯಾಗಿರುವುದರಿಂದ, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.ಪ್ರಕರಣ ಭೇದಿಸುವಲ್ಲಿ ಪಿಎಸ್‌ಐ ಎಸ್.ಕೆ. ಹೊಳೆನ್ನವರ, ಎಎಸ್‌ಐ ಎಂ.ಎ. ಪಾಟೀಲ ಹಾಗೂ ಸಿಬ್ಬಂದಿಗಳಾದ ಡಿ.ಸಿ. ಸಾಗರ, ಬಸವರಾಜ ನರಗುಂದ, ಗೋವಿಂದಪ್ಪ ಪೂಜಾರ, ರಫೀಕ್ ಮುಜಾವರ, ಶಿವಾಜಿ ಚವ್ಹಾಣ ಮತ್ತು ರಮೇಶ್ ಪಾಟೀಲ ಅವರ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

May 13, 2026 | 09:10 AM
241 0
ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹3 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಓರ್ವ ಅರೆಸ್ಟ್

ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹3 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಓರ್ವ ಅರೆಸ್ಟ್

ಬೆಳಗಾವಿ: ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು, ಇದೀಗ ಮತ್ತೊಂದು ಯಶಸ್ವಿ ದಾಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ನಗರದ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48ರ ಸರ್ವಿಸ್ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಮಹಾರಾಷ್ಟ್ರ ಮೂಲದ ಸೈಯ್ಯದ್ ನಿಸಾರ್ ಸೈಯ್ಯದ್ ಇಸಾಕ್ (40) ಎಂಬಾತನನ್ನು ಬಂಧಿಸಲಾಗಿದೆ.ಬಂಧಿತನಿಂದ ಸುಮಾರು 6 ಕೆಜಿ 145 ಗ್ರಾಂ ಗಾಂಜಾ, ಒಂದು ವಿವೋ ಮೊಬೈಲ್ ಫೋನ್ ಸೇರಿದಂತೆ ಒಟ್ಟು ₹3.10 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯವೇ ಸುಮಾರು ₹3.05 ಲಕ್ಷ ಎಂದು ಅಂದಾಜಿಸಲಾಗಿದೆ.ಸಿಸಿಬಿ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ, ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ತಂಡದ ಕಾರ್ಯಾಚರಣೆಯಲ್ಲಿ ಈ ಯಶಸ್ಸು ದೊರೆತಿದೆ. ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಸಿಸಿಬಿ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಹಿನ್ನೆಲೆ ಹಾಗೂ ಗಾಂಜಾ ಪೂರೈಕೆ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

May 12, 2026 | 01:52 PM
41 0
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ: 12 ವರ್ಷದ ಬಾಲಕ ಬಲಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ: 12 ವರ್ಷದ ಬಾಲಕ ಬಲಿ

ಮಲೆ ಮಹದೇಶ್ವರ ಬೆಟ್ಟ: ನಾಗಮಲೆ ಮಾರ್ಗದಲ್ಲಿ ಚಿರತೆ ದಾಳಿಗೆ 12 ವರ್ಷದ ಬಾಲಕ ಬಲಿಯಾದ ಹೃದಯವಿದ್ರಾವಕ ಘಟನೆ ನಿನ್ನೆ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಹರ್ಷಿತ್ ಗೌಡ ಎಂದು ಗುರುತಿಸಲಾಗಿದೆ.ಬೆಂಗಳೂರು ನಗರದ ಲಗ್ಗೆರೆ ವಾರ್ಡಿನ ಕುಟುಂಬವು ದೇವರ ದರ್ಶನಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಕುಟುಂಬಸ್ಥರ ಕಣ್ಣೆದುರೇ ಚಿರತೆ ಬಾಲಕನ ಮೇಲೆ ದಾಳಿ ನಡೆಸಿ, ಪೊದೆಗಳೊಳಗೆ ಎಳೆದೊಯ್ದಿರುವುದು ಆತಂಕ ಸೃಷ್ಟಿಸಿದೆ.ಈ ಘಟನೆ ಇಂಡಿಗನತ್ತ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಸೇರಿಕೊಂಡು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಅರಣ್ಯ ಪ್ರದೇಶದಲ್ಲೇ ಬಾಲಕನ ಶವ ಪತ್ತೆಯಾಯಿತು.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ, ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆಯ ನಂತರ ನಾಗಮಲೆ ಮಾರ್ಗದ ಭದ್ರತೆ ಕುರಿತು ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ. ಪ್ರವಾಸಿಗರಲ್ಲಿ ಆತಂಕ ಹೆಚ್ಚಾಗಿದ್ದು, ಎಂಎಂ ಹಿಲ್ಸ್ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

May 11, 2026 | 11:11 AM
179 0
ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಹೊಸ ಇನ್ಸ್ಪೆಕ್ಟರ್ ನೇಮಕ

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಹೊಸ ಇನ್ಸ್ಪೆಕ್ಟರ್ ನೇಮಕ

ಧಾರವಾಡ: ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷ್ನರೇಟ್ ವ್ಯಾಪ್ತಿಯ ಧಾರವಾಡ ಉಪನಗರ ಪೊಲೀಸ್ ಠಾಣೆಯ ಖಾಲಿ ಇದ್ದ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆ ಇದೀಗ ಭರ್ತಿಯಾಗಿದೆ.ಹುಕ್ಕೇರಿ ತಾಲೂಕಿನ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ್ ಕಲ್ಲಪ್ಪ ಬಸಾಪುರ್ ಅವರನ್ನು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಹುದಿನಗಳಿಂದ ಈ ಹುದ್ದೆ ಖಾಲಿ ಇದ್ದ ಹಿನ್ನೆಲೆ, ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಂಗೆನಹಳ್ಳಿ ಅವರು ಹುಬ್ಬಳ್ಳಿ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆಗಳ ಎರಡು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು.ಈ ನೇಮಕಾತಿಯಿಂದ ಧಾರವಾಡ ಉಪನಗರ ಪೊಲೀಸ್ ಠಾಣೆಯ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಕಾರ್ಯಗಳಿಗೆ ಮತ್ತಷ್ಟು ಚುರುಕು ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಸ್ಥಳೀಯರು ಹಾಗೂ ಸಾರ್ವಜನಿಕ ವಲಯದಲ್ಲೂ ಹೊಸ ಇನ್ಸ್ಪೆಕ್ಟರ್ ನೇಮಕಕ್ಕೆ ಸ್ವಾಗತ ವ್ಯಕ್ತವಾಗಿದೆ.ಬಹುಕಾಲದಿಂದ ಖಾಲಿ ಇದ್ದ ಪ್ರಮುಖ ಹುದ್ದೆ ಭರ್ತಿಯಾಗಿರುವುದರಿಂದ ಪೊಲೀಸ್ ಇಲಾಖೆಯ ಕಾರ್ಯ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

May 11, 2026 | 04:02 AM
162 0
ಪ್ರಕ್ರಿಯಾ ಹಾಸ್ಪಿಟಲ್ಸ್‌ನಿಂದ ‘ಪ್ರಕ್ರಿಯಾ ಕ್ಯಾನ್ಸರ್ ಕೇರ್’ ಆರಂಭ: ಸಮಗ್ರ ಆಂಕೊಲಾಜಿ ಸೇವೆಗಳ ವಿಸ್ತರಣೆ

ಪ್ರಕ್ರಿಯಾ ಹಾಸ್ಪಿಟಲ್ಸ್‌ನಿಂದ ‘ಪ್ರಕ್ರಿಯಾ ಕ್ಯಾನ್ಸರ್ ಕೇರ್’ ಆರಂಭ: ಸಮಗ್ರ ಆಂಕೊಲಾಜಿ ಸೇವೆಗಳ ವಿಸ್ತರಣೆ

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ: ಎಂಟನೇ ಮೈಲಿಯ ಪ್ರಕ್ರಿಯಾ ಹಾಸ್ಪಿಟಲ್ಸ್, ತನ್ನ ಸಮಗ್ರ ಕ್ಯಾನ್ಸರ್ ಕೇಂದ್ರವಾದ 'ಪ್ರಕ್ರಿಯಾ ಕ್ಯಾನ್ಸರ್ ಕೇರ್' ಮತ್ತು ವಿಕಿರಣ ಚಿಕಿತ್ಸಾ (ರೇಡಿಯೋಥೆರಪಿ) ವಿಭಾಗವನ್ನು ಉದ್ಘಾಟಿಸುವ ಮೂಲಕ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುಧಾರಿತ ಮತ್ತು ಕರುಣಾಭರಿತ ಕ್ಯಾನ್ಸರ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ಈ ನೂತನ ಕೇಂದ್ರವನ್ನು ವಿನ್ಯಾಸಗೊಳಿಸಲಾಗಿದೆ.ಕಾರ್ಯಕ್ರಮದಲ್ಲಿ ಶಾಸಕ ಎಸ್ ಮುನಿರಾಜು ಮಾತನಾಡಿ 'ಇಂತಹ ಸಮಗ್ರ ಕ್ಯಾನ್ಸರ್ ಕೇರ್ ಸೌಲಭ್ಯದ ಪ್ರಾರಂಭವು ವಿಶೇಷ ಆರೋಗ್ಯ ಸೇವೆಯ ಲಭ್ಯತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಸುಧಾರಿತ ಮತ್ತು ರೋಗಿ-ಕೇಂದ್ರಿತ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಸೇವೆಗಳ ಅಗತ್ಯತೆಯನ್ನು ಇದು ಪ್ರತಿಬಿಂಬಿಸುತ್ತದೆ. ಈ ಅರ್ಥಪೂರ್ಣ ಉಪಕ್ರಮಕ್ಕಾಗಿ ನಾನು ಪ್ರಕ್ರಿಯಾ ಹಾಸ್ಪಿಟಲ್ಸ್ ಅನ್ನು ಅಭಿನಂದಿಸುತ್ತೇನೆ' ಎಂದರು. ಪ್ರಕ್ರಿಯಾ ಹಾಸ್ಪಿಟಲ್ಸ್‌ನ ಸಿಇಒ ಮತ್ತು ಮೂಳೆರೋಗ ಆಂಕೊಸರ್ಜನ್ ಡಾ. ಶ್ರೀನಿವಾಸ್ ಚಿರಕುರಿ, “ವಾಯುವ್ಯ ಬೆಂಗಳೂರಿನಲ್ಲಿ ಸ್ಥಾಪಿಸಲಾದ ಮೊದಲ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ ಇದಾಗಿದೆ. ದೀರ್ಘಕಾಲದಿಂದ ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗಿದ್ದ ಕರ್ನಾಟಕದ ನೆರೆಯ ಜಿಲ್ಲೆಗಳ ರೋಗಿಗಳಿಗೆ ಇದು ವರದಾನವಾಗಲಿದೆ. ಪ್ರತಿದಿನ ನೂರಾರು ರೋಗಿಗಳು ರೇಡಿಯೋಥೆರಪಿ, ಕಿಮೋಥೆರಪಿ ಮತ್ತು ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಪ್ರಕ್ರಿಯಾ ಕ್ಯಾನ್ಸರ್ ಕೇರ್ ಈ ರೋಗಿಗಳ ಪ್ರಯಾಣದ ಸಮಯ ಮತ್ತು ಒಟ್ಟಾರೆ ಚಿಕಿತ್ಸಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಇತರ ಕೇಂದ್ರಗಳಿಗಿಂತ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಯನ್ನು ನಾವು ನೀಡುತ್ತಿದ್ದೇವೆ,” ಎಂದು ಹೇಳಿದರು.ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್  ನಿರ್ಮಾಪಕ ಈ ಕೃಷ್ಣಪ್ಪ  ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ  ಪ್ರಕ್ರಿಯ  ಆಸ್ಪತ್ರೆಯ ಸಿಇಒ  ಶ್ರೀನಿವಾಸ್ ಚಿರುಕುರಿ   ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್  ಜೆಡಿಎಸ್ ಮುಖಂಡ ಮುನೇಗೌಡ ಎಂ ಇನ್ನು ಮುಂತಾದವರು  ಉಪಸ್ಥಿತರಿದ್ದರು   ವರದಿ : ಪಬ್ಲಿಕ್ ರೈಡ್ ದೇವರಾಜ್

May 10, 2026 | 03:45 PM
27 0
"ದಾಸರಹಳ್ಳಿ ಕ್ಷೇತ್ರದ ಯುವ ಮೋರ್ಚಾ ಬಿಜೆಪಿ ಅಧ್ಯಕ್ಷರಾಗಿ ಭರತ್ ಸೌಂದರ್ಯ ನೇಮಕಕ್ಕೆ  ಅಭಿನಂದನೆಗಳ ಮಹಾಪೂರಾ"

"ದಾಸರಹಳ್ಳಿ ಕ್ಷೇತ್ರದ ಯುವ ಮೋರ್ಚಾ ಬಿಜೆಪಿ ಅಧ್ಯಕ್ಷರಾಗಿ ಭರತ್ ಸೌಂದರ್ಯ ನೇಮಕಕ್ಕೆ ಅಭಿನಂದನೆಗಳ ಮಹಾಪೂರಾ"

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ: ಬಿಜೆಪಿ ಪಕ್ಷದ ನಿಷ್ಠಾವಂತ ಪ್ರಾಮಾಣಿಕತೆ ಪಕ್ಷ ಸಂಘಟನೆಯ ಚಾತುರ್ಯ ಹಾಗೂ  ಸರಳ ಸಜ್ಜನಿಕೆ ವ್ಯಕ್ತಿತ್ವದ ಹೊಂದಿದ ವ್ಯಕ್ತಿ ಬಡವರ ದೀನ ದಲಿತರ ನಿರ್ಗತಿಕ ಮತ್ತು ವಿದ್ಯಾರ್ಥಿಗಳ ಆಶಾಕಿರಣವಾದ  ವ್ಯಕ್ತಿ  ಭರತ್ ಸೌಂದರ್ಯ ಅವರನ್ನು ಕ್ಷೇತ್ರದ ಶಾಸಕ ಎಸ್.ಮುನಿರಾಜು ಅವರ  ನಿರ್ದೇಶನ ಮಾರ್ಗದರ್ಶನದಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ  ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಅಧ್ಯಕ್ಷರಾಗಿ  ನೇಮಕಗೊಂಡ ನೂತನ ಅಧ್ಯಕ್ಷ  ಭರತ್ ಸೌಂದರ್ಯ ಅವರಿಗೆ ಕ್ಷೇತ್ರದ ಶಾಸಕ ಎಸ್ ಮುನಿರಾಜು,ಬಿಜೆಪಿ ಅಧ್ಯಕ್ಷ ಸೇರಿದಂತೆ ಮುಖಂಡರು ಮಹಿಳೆಯರು ಯುವಕರು ಯುವತಿಯರು ಮುಂತಾದವರು ಅಭಿನಂದನೆ ತಿಳಿಸಿದ್ದಾರೆ.ವರದಿ : ಪಬ್ಲಿಕ್ ರೈಡ್ ದೇವರಾಜ್

May 8, 2026 | 03:40 PM
42 0
ಬ್ರೇಕಿಂಗ್: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ವಲಯ ಕಚೇರಿಗಳಲ್ಲಿ ಲೋಕಾಯುಕ್ತ ದಾಳಿ

ಬ್ರೇಕಿಂಗ್: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ವಲಯ ಕಚೇರಿಗಳಲ್ಲಿ ಲೋಕಾಯುಕ್ತ ದಾಳಿ

ಹುಬ್ಬಳ್ಳಿ 08/05/2026: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಾಲ್ಕು ಪ್ರಮುಖ ವಲಯ ಕಚೇರಿಗಳ ಮೇಲೆ ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಲಯ ಸಂಖ್ಯೆ 6, 7, 10 ಮತ್ತು 11 ರ ಕಚೇರಿಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.ಈ ಸಮಯದಲ್ಲಿ ದಾಖಲೆಗಳು, ಲೆಕ್ಕಪತ್ರಗಳು ಮತ್ತು ಇತರ ಸೂಕ್ಷ್ಮ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.ಕೇವಲ ಕೆಲವೇ ದಿನಗಳ ಹಿಂದೆ 'ಪಬ್ಲಿಕ್ ರೈಡ್' ಪತ್ರಿಕೆಯು ವಲಯ ಸಂಖ್ಯೆ 10 ರ ಕಚೇರಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಲೋಕಾಯುಕ್ತ ಈ ಕಾರ್ಯಾಚರಣೆಗೆ ಮುಂದಾಗಿದ್ದಾರೆಂದು ಶಂಕಿಸಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ದಾಳಿಯ ಸಂದರ್ಭದಲ್ಲಿ ವಲಯ ಕಚೇರಿಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿಗಳು ಕಳವಳಕ್ಕೊಳಗಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ. ಹೆಚ್ಚಿನ ವಿವರಗಳು ಬರಬೇಕಾಗಿದೆ.

May 8, 2026 | 07:29 AM
103 0
ಧಾರವಾಡ:ಮನೆ ಕಟ್ಟಲು ತೋಡಿದ ನೀರಿನ ಗುಂಡಿಯಲ್ಲಿ ಇಬ್ಬರು ಬಾಲಕರ ದಾರುಣ ಮೃತ್ಯು

ಧಾರವಾಡ:ಮನೆ ಕಟ್ಟಲು ತೋಡಿದ ನೀರಿನ ಗುಂಡಿಯಲ್ಲಿ ಇಬ್ಬರು ಬಾಲಕರ ದಾರುಣ ಮೃತ್ಯು

ಧಾರವಾಡ: ಮನೆ ಕಟ್ಟಲು ತೋಡಿದ್ದ ನೀರಿನ ತುಂಬಿದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.ಮೃತರನ್ನು ಗ್ರಾಮದ ಕುಮಾರ್ ನಿಂಗಪ್ಪ ಮುದಕಣ್ಣವರ (7) ಮತ್ತು ಧಾರವಾಡದ ಸತ್ತೂರು ನಿವಾಸಿಯಾಗಿದ್ದು, ತವರು ಮನೆಗೆ ಬಂದಿದ್ದ ಪ್ರಥಮ್ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ.ಬುಧವಾರ ಸಂಜೆ ಆಟವಾಡಲು ಹೋದ ಬಾಲಕರು ರಾತ್ರಿಯಾದರೂ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ತೀವ್ರ ಆತಂಕಕ್ಕೊಳಗಾಗಿ ಹುಡುಕಾಟ ಆರಂಭಿಸಿದರು. ತಡರಾತ್ರಿ ವೇಳೆ ಗ್ರಾಮದಲ್ಲಿಯೇ ಮನೆ ಕಟ್ಟಲು ತೋಡಿದ್ದ ನೀರಿನ ಗುಂಡಿಯಲ್ಲಿ ಬಾಲಕರು ಬಿದ್ದಿರುವುದು ಪತ್ತೆಯಾಯಿತು. ಒಳಗೆ ಇಳಿದು ನೋಡುವಷ್ಟರಲ್ಲಿ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡಿ ತೋಡಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ದುರ್ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಶೋಕಾಕುಲ ವಾತಾವರಣ ನೆಲೆಸಿದ್ದು, ಗ್ರಾಮದಲ್ಲಿ ದುಃಖದ ಅಲೆ ಸಂಚರಿಸುತ್ತಿದೆ.

May 7, 2026 | 04:18 AM
125 0