ಕರ್ನಾಟಕ News

Discover the latest headlines in this section.

ರಾಜಗೋಪಾಲ್ ನಗರ ವಾರ್ಡಿನ ಜಿ ಬಿ ಎ ಆಕಾಂಕ್ಷಿ ಬಿ ಜಗದೀಶ್ ಕುಮಾರ್ ಅವರ ಜನ್ಮದಿನ ಆಚರಣೆ

ರಾಜಗೋಪಾಲ್ ನಗರ ವಾರ್ಡಿನ ಜಿ ಬಿ ಎ ಆಕಾಂಕ್ಷಿ ಬಿ ಜಗದೀಶ್ ಕುಮಾರ್ ಅವರ ಜನ್ಮದಿನ ಆಚರಣೆ

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ :ರಾಜಗೋಪಾ ಲನಗರ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಬಿಎ ಪ್ರಬಲ ಆಕಾಂಕ್ಷಿ ಬಿ.ಜಗದೀಶ್ ಕುಮಾರ್ ಅವರ ಹುಟ್ಟು ಹಬ್ಬಕ್ಕೆ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕರಾದ ಆರ್. ಮಂಜುನಾಥ್ ಅವರು ಅಪಾರ ಬೆಂಬಲಿಗರೊಂದಿಗೆ ಅವರ ನಿವಾಸಕ್ಕೆ ಆಗಮಿಸಿ ಬೃಹತ್ ಹೂ ಮಾಲೆ ಹಾಕಿ ಕೇಕ್ ತಿನ್ನಿಸಿ ಮೈಸೂರ್ ಪೇಟ ತೋರಿಸಿ ಹಣ್ಣಿನ ಬುಟ್ಟಿ ನೀಡಿ ಪರಿಸರದ ದಿನದ ಅಂಗವಾಗಿ ಗಿಡವನ್ನು ನೀಡುವ ಮೂಲಕ ಜನ್ಮದಿನದ ಶುಭ ಕೋರಿದರು.ಈ ಸಂದರ್ಭದಲ್ಲಿ ಹೆಗ್ಗನಹಳ್ಳಿ  ಕಾಂಗ್ರೆಸ್ ಮುಖಂಡರಾದ ಬ ನಾ ರವಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ, ಹನುಮಂತರಾಜು, ಕಾಂಗ್ರೆಸ್ ಹಿರಿಯ ಮುಖಂಡ ಮಣಿ, ಮುಖಂಡರುಗಳಾದ ಭೈರವ, ಕಿಶೋರ್, ಮಹಿಳಾ ಮುಖಂಡರುಗಳಾದ ಉಷಾರಾಜ್,ಚಂದ್ರಮ್ಮ, ಬಿಟಿಎಂ ಲೇಔಟ್ ರಾಜು, ಮೋಹನ, ಲಗ್ಗೆರೆ ಮಂಜುನಾಥ್, ಸಮಾಜ ಸೇವಕರಾದ ಸೋಮಣ್ಣ,  ಕೃಷ್ಣ ಶೆಟ್ಟಿ, ಮೆಡಿಕಲ್ ಮಂಜುನಾಥ್, ಸೈಯದ್, ಬಸವರಾಜು, ರಾಜು ಹಾಗೂ ಜೆಡಿಎನ್ ಕುಟುಂಬಸ್ಥರು ಮುಂತಾದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು.ವರದಿ : ಪಬ್ಲಿಕ್ ರೈಡ್ ದೇವರಾಜ್

Jun 9, 2026 | 12:20 PM
19 0
ಬೆಂಗಳೂರು ನಗರದಲ್ಲಿ ಅಕ್ರಮ ಕ್ವಾರಿ ಮೇಲೆ ಪೊಲೀಸರ ದಾಳಿ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ವಶ

ಬೆಂಗಳೂರು ನಗರದಲ್ಲಿ ಅಕ್ರಮ ಕ್ವಾರಿ ಮೇಲೆ ಪೊಲೀಸರ ದಾಳಿ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ವಶ

ಬೆಂಗಳೂರು: ನಗರ ಹೊರವಲಯದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಲ್ಲಿನ ಕ್ವಾರಿ ಮೇಲೆ ಪೊಲೀಸರು ದಾಳಿ ನಡೆಸಿ, ಅಪಾರ ಪ್ರಮಾಣದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್‌ಗಳು ಹಾಗೂ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.ಯಾರಪ್ಪನಹಳ್ಳಿ ಗ್ರಾಮದ ವಿಧಾನಸೌಧ ಲೇಔಟ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ವರ ಗ್ರಾನೈಟ್ಸ್ ಸಂಸ್ಥೆಯು ಯಾವುದೇ ಸಂಬಂಧಿತ ಪ್ರಾಧಿಕಾರದ ಅನುಮತಿ ಹಾಗೂ ಅಗತ್ಯ ಪರವಾನಗಿ ಇಲ್ಲದೆ ಕಲ್ಲಿನ ಕ್ವಾರಿ ನಡೆಸುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.ಜೂನ್ 4ರಂದು ರಾತ್ರಿ ಗಸ್ತು ವೇಳೆ ಅವಲಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಕಲ್ಲು ಸ್ಫೋಟಿಸಲು ಬಳಸಲಾಗುತ್ತಿದ್ದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್‌ಗಳು ಹಾಗೂ ಇತರೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕ್ವಾರಿ ಚಟುವಟಿಕೆಗೆ ಸಂಬಂಧಿಸಿದಂತೆ ವೆಂಕಟರಮಣ ರೆಡ್ಡಿ, ಲೋಕೇಶ್ ರೆಡ್ಡಿ, ವಿಕಾಸ್, ತೋಹಿದ್ ಹಾಗೂ ಸಂದೀಪ್ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.ವಶಪಡಿಸಿಕೊಳ್ಳಲಾದ ಸ್ಫೋಟಕ ಸಾಮಗ್ರಿಗಳನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದು, ಅಕ್ರಮ ಕ್ವಾರಿ ನಡೆಸುತ್ತಿರುವ ಜಾಲದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.ಪರವಾನಗಿ ಇಲ್ಲದೆ ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಬಳಸಿರುವ ಆರೋಪ ಗಂಭೀರವಾಗಿದ್ದು, ಪ್ರಕರಣದ ಎಲ್ಲ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Jun 9, 2026 | 08:30 AM
114 0
ಗುರುತಿನ ಚೀಟಿ ಇಲ್ಲದವರಿಗೆ ಮದ್ಯದ ಅಂಗಡಿಗೆ ಪ್ರವೇಶವಿಲ್ಲ: ಅಪ್ರಾಪ್ತರಿಗೆ ಮದ್ಯ ಮಾರಾಟ ಅಪರಾಧ – ಪ್ರಿಯಾಂಕ್ ಖರ್ಗೆ

ಗುರುತಿನ ಚೀಟಿ ಇಲ್ಲದವರಿಗೆ ಮದ್ಯದ ಅಂಗಡಿಗೆ ಪ್ರವೇಶವಿಲ್ಲ: ಅಪ್ರಾಪ್ತರಿಗೆ ಮದ್ಯ ಮಾರಾಟ ಅಪರಾಧ – ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್ 9:ಅಪ್ರಾಪ್ತ ವಯಸ್ಕರ ಮದ್ಯಪಾನ ಮತ್ತು ಮಾದಕ ವ್ಯಸನವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ರಾಜ್ಯದ ಎಲ್ಲಾ ಪಬ್‌ಗಳು, ಬ್ರೂವರೀಸ್, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಮದ್ಯಪಾನವನ್ನು ತಡೆಯುವ ಕುರಿತು ನೋಟಿಸ್ ನೀಡುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ Priyank Kharge ತಿಳಿಸಿದ್ದಾರೆ.ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಇತ್ತೀಚಿನ ಅಧ್ಯಯನದಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಅಧ್ಯಯನದ ಪ್ರಕಾರ, ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಸೇವನೆಯಿಂದ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 33 ಶೇಕಡಾ ಮಂದಿ ಮದ್ಯ ವ್ಯಸನಕ್ಕೆ ಹಾಗೂ 18 ಶೇಕಡಾ ಮಂದಿ ತಂಬಾಕು ವ್ಯಸನಕ್ಕೆ ಒಳಗಾಗಿರುವುದು ಕಂಡುಬಂದಿದೆ.ಇದಲ್ಲದೆ, ಮದ್ಯಪಾನ ಆರಂಭಿಸುವ ಸರಾಸರಿ ವಯಸ್ಸು 17 ವರ್ಷವಾಗಿದ್ದು, ಕೆಲ ಪ್ರಕರಣಗಳಲ್ಲಿ 8 ವರ್ಷದ ಮಕ್ಕಳೂ ಮದ್ಯಪಾನ ಆರಂಭಿಸಿರುವುದು ದಾಖಲಾಗಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ.ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳು ಗ್ರಾಹಕರ ವಯಸ್ಸಿನ ಪರಿಶೀಲನೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸರ್ಕಾರ ಸೂಚಿಸಿದೆ.ಪ್ರಮುಖ ನಿರ್ದೇಶನಗಳುಮಾನ್ಯ ಗುರುತಿನ ಚೀಟಿ ಇಲ್ಲದವರಿಗೆ ಪ್ರವೇಶ ನಿರಾಕರಣೆಸರ್ಕಾರ ನೀಡಿದ ವಯಸ್ಸಿನ ಪುರಾವೆ ಕಡ್ಡಾಯಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿದಾರರೇ ನೇರ ಹೊಣೆಗಾರರುಪ್ರವೇಶ ದ್ವಾರದಲ್ಲಿನ ಸಿಸಿಟಿವಿಗಳು ಕಾರ್ಯನಿರ್ವಹಿಸಬೇಕು ಹಾಗೂ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕುಪೊಲೀಸ್ ಇಲಾಖೆ, ನಿವಾಸಿಗಳ ಸಂಘಗಳು ಹಾಗೂ ನಾಗರಿಕ ಗುಂಪುಗಳೊಂದಿಗೆ ಸಮನ್ವಯ ಸಾಧಿಸಬೇಕು"ವಾಣಿಜ್ಯ ಲಾಭಕ್ಕಾಗಿ ಮಕ್ಕಳ ಸುರಕ್ಷತೆ ಮತ್ತು ಭವಿಷ್ಯವನ್ನು ಬಲಿಕೊಡಲು ಸಾಧ್ಯವಿಲ್ಲ. ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಕೆ ಅಥವಾ ಅವಕಾಶ ಕಲ್ಪಿಸುವ ಸಂಸ್ಥೆಗಳ ವಿರುದ್ಧ ಕರ್ನಾಟಕ ಸರ್ಕಾರ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸಲಿದೆ. ಗುರುತಿನ ಚೀಟಿ ಇಲ್ಲದಿದ್ದರೆ ಪ್ರವೇಶವಿಲ್ಲ; ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಅಪರಾಧ" ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

Jun 9, 2026 | 05:52 AM
117 0
ಮಳವಳ್ಳಿ ಶಿವಣ್ಣ ರಿಂದ ವಿಧಾನಪರಿಷತ್ ಗೆ ನಾಮಪತ್ರ ಸಲ್ಲಿಕೆ

ಮಳವಳ್ಳಿ ಶಿವಣ್ಣ ರಿಂದ ವಿಧಾನಪರಿಷತ್ ಗೆ ನಾಮಪತ್ರ ಸಲ್ಲಿಕೆ

ಪಬ್ಲಿಕ್ ರೈಡ್ ನ್ಯೂಸ್ : ಪೀಣ್ಯ ದಾಸರಹಳ್ಳಿ : ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನಸೌಧದಲ್ಲಿಮಳವಳ್ಳಿ ಶಿವಣ್ಣ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ನಾನು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡು ಪಕ್ಷದ ವರಿಷ್ಠರು ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿರುವುದನ್ನು ಗಮನಿಸಿ ನನ್ನನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿದ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ  ಪಕ್ಷದ ಎಲ್ಲಾ ಅಬಾರಿಯಾಗಿದ್ದೇನೆ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಶ್ರೀಗಂಧ ನಗರದ ಜಿಬಿಎ ಆಕಾಂಕ್ಷಿ ಎಂವಿ ಸೋಮಶೇಖರ್ ಏರ್ಟೆಲ್ ಸೋಮಣ್ಣ ಚಲನಚಿತ್ರ ನಿರ್ಮಾಪಕರು ಹಾಗೂ ಯುವ ಮುಖಂಡರಾದ ಜನಾರ್ದನ್ ಮಳವಳ್ಳಿ ಕಾಂಗ್ರೆಸ್ ಮುಖಂಡರಾದ  ಸಿದ್ದೇಗೌಡ, ಸುರೇಶ್ , ಹಾಜರಿದ್ದರು.ವರದಿ, ಪಬ್ಲಿಕ್ ರೈಡ್ ದೇವರಾಜ್

Jun 8, 2026 | 12:57 PM
16 0
ವಿಶ್ವ ಪರಿಸರ ದಿನಾಚರಣೆ: ರಾಜಾಜಿನಗರ ಮೆಟ್ರೋ ನಿವಾಸಿಗಳ ಕಲ್ಯಾಣ ಸಂಘದಿಂದ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ: ರಾಜಾಜಿನಗರ ಮೆಟ್ರೋ ನಿವಾಸಿಗಳ ಕಲ್ಯಾಣ ಸಂಘದಿಂದ ಜಾಗೃತಿ ಕಾರ್ಯಕ್ರಮ

ಪೀಣ್ಯ ದಾಸರಹಳ್ಳಿ:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ರಾಜಾಜಿನಗರ ಮೆಟ್ರೋ ನಿವಾಸಿಗಳ ಕಲ್ಯಾಣ ಸಂಘದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರದ ಟ್ರಾಫಿಕ್ ಮತ್ತು ಪ್ಲಾನಿಂಗ್ ವಿಭಾಗದ ಎಸಿಪಿ ಶ್ರೀಮತಿ ಕವಿತಾ ಕರಿಯಪ್ಪ ಭಾಗವಹಿಸಿ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಜವಾಬ್ದಾರಿಗಳ ಕುರಿತು ಮಾತನಾಡಿದರು.ಇದೇ ವೇಳೆ ಶ್ರೀಮತಿ ಆರ್ತಿ ತೊಪ್ಪ ಅವರು ತ್ಯಾಜ್ಯ ನಿರ್ವಹಣೆ, ಮರುಬಳಕೆ ಹಾಗೂ ಸುಸ್ಥಿರ ಜೀವನಶೈಲಿಯ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಬದುಕಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ವರದಿ: ದೇವರಾಜ್, ಪಬ್ಲಿಕ್ ರೈಡ್

Jun 8, 2026 | 02:49 AM
16 0
ಸಿಇಟಿಯಲ್ಲಿ ರಾಜ್ಯಕ್ಕೆ 32ನೇ ರ್ಯಾಂಕ್ ಪಡೆದ ಅಸೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಲಹರಿ ಶೆಟ್ಟಿ

ಸಿಇಟಿಯಲ್ಲಿ ರಾಜ್ಯಕ್ಕೆ 32ನೇ ರ್ಯಾಂಕ್ ಪಡೆದ ಅಸೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಲಹರಿ ಶೆಟ್ಟಿ

ಪಬ್ಲಿಕ್ ರೈಡ್ ನ್ಯೂಸ್ | ಪೀಣ್ಯ-ದಾಸರಹಳ್ಳಿ2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಹೆಸರಘಟ್ಟ ಮುಖ್ಯರಸ್ತೆಯ ಅಸೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ **ಲಹರಿ ಶೆಟ್ಟಿ** ಅವರು ರಾಜ್ಯ ಮಟ್ಟದಲ್ಲಿ **32ನೇ ರ್ಯಾಂಕ್** ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಕಾಲೇಜಿನ ಪ್ರಾಂಶುಪಾಲ **ಬಿ.ಎಂ. ವೆಂಕಟೇಶ**, "ಲಹರಿ ಶೆಟ್ಟಿ ಅವರ ಸಮರ್ಪಣೆ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಅವರ ಈ ಸಾಧನೆ ಅಸೆಂಟ್ ಪಿಯು ಕಾಲೇಜು ಕುಟುಂಬಕ್ಕೆ ಅಪಾರ ಹೆಮ್ಮೆ ತಂದಿದ್ದು, ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ" ಎಂದು ಹೇಳಿದರು."ಲಹರಿ ಅವರ ಮುಂದಿನ ಶೈಕ್ಷಣಿಕ ಜೀವನದಲ್ಲಿಯೂ ಇದೇ ರೀತಿಯ ಯಶಸ್ಸು ದೊರೆಯಲಿ. ಅವರು ಇನ್ನಷ್ಟು ಉನ್ನತ ಸಾಧನೆಗಳ ಮೂಲಕ ಕಾಲೇಜು ಹಾಗೂ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ" ಎಂದು ಶುಭ ಹಾರೈಸಿದರು.ವಿದ್ಯಾರ್ಥಿನಿಯ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಮತ್ತೊಂದು ಉತ್ತಮ ಉದಾಹರಣೆಯಾಗಿದೆ.ವರದಿ: ಪಬ್ಲಿಕ್ ರೈಡ ದೇವರಾಜ್

Jun 6, 2026 | 01:31 PM
172 0
ರಾಯಪುರದಲ್ಲಿ ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ರಾಯಪುರದಲ್ಲಿ ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ರಾಯಪುರದಲ್ಲಿರುವ ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿಂದು ವಿಶ್ವ ಪರಿಸರ ದಿನಾಚರಣೆಯನ್ನು ಎನ್ ಎಸ್ ಎಸ್ ಘಟಕದ ಆಶ್ರಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಪುಷ್ಪಾ ಬಸನ್ ಗೌಡರ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ರಕ್ಷಣೆ ನಮ್ಮೆಲ್ಲರ  ಆದ್ಯತೆಯಾಗಲಿ. ಪರಿಸರವನ್ನು ಕಾಪಾಡುವುದು ಎಂದರೆ ನಮ್ಮ ಮುಂದಿನ ಪೀಳಿಗೆಯ ಭವಿಷ್ಯವನ್ನು ಕಾಪಾಡಿದಂತೆ. ಈ ಬದಲಾವಣೆ ಇಂದಿನಿಂದಲೇ ಆರಂಭವಾಗಲಿ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರವಿಲ್ಲದೆ ಬದುಕಿಲ್ಲ. ಪರಿಸರವನ್ನು ಕಾಪಾಡಿದರೆ ಜೀವ ಜಗತ್ತು ಬದುಕುತ್ತದೆ ಎಂದರು. ಮಾತನಾಡಿದ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ. ತೇಜಸ್ವಿನಿ ಅರಳಿಕಟ್ಟಿ ಅವರು  ಮಕ್ಕಳಂತೆ ಗಿಡಗಳನ್ನು ಪ್ರೀತಿಸುವ ಮನಸ್ಸು ನಮ್ಮೆಲ್ಲರದಾಗಲಿ . ಅದರಲ್ಲೂ ಎನ್ ಎಸ್ ಎಸ್ ಸ್ವಯಂಸೇವಕರು ಪರಿಸರ ರಕ್ಷಣೆಯತ್ತ ತಮ್ಮನ್ನು ತೊಡಗಿಸಿಕೊಳ್ಳಿ. ಪ್ರತಿ ಸಂತೋಷದ ಕ್ಷಣಗಳಲ್ಲಿ ಗಿಡವನ್ನು ನೆಡುವ ಮನಸ್ಸು ಮಾಡಿ. ಪರಿಸರ ಕಾಪಾಡಿ ಎಂದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಮಸ್ತ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Jun 5, 2026 | 01:49 PM
46 0
ತಾರಸಿ ಹಾಗೂ ಗಾರ್ಡನ್ ನಲ್ಲಿ ಕೈತೋಟ ನಿರ್ಮಿಸಿರುವ ಮನೆಗಳಿಗೆ ಗ್ರೀನ್ ಹೌಸ್ ಅಫ್ ದಾಸರಹಳ್ಳಿ ನಾಮಫಲಕ ಆಳವಡಿಕೆ.

ತಾರಸಿ ಹಾಗೂ ಗಾರ್ಡನ್ ನಲ್ಲಿ ಕೈತೋಟ ನಿರ್ಮಿಸಿರುವ ಮನೆಗಳಿಗೆ ಗ್ರೀನ್ ಹೌಸ್ ಅಫ್ ದಾಸರಹಳ್ಳಿ ನಾಮಫಲಕ ಆಳವಡಿಕೆ.

ಪೀಣ್ಯ ದಾಸರಹಳ್ಳಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾ  ವತಿಯಿಂದ ಮನೆಗಳ ತಾರಸಿ ಹಾಗೂ ಗಾರ್ಡನ್ ನಲ್ಲಿ ಕೈತೋಟ ನಿರ್ಮಿಸಿ ಹಲವಾರು ವಿಭಿನ್ನ ಸಸಿಗಳನ್ನು ಬೆಳೆದಿರುವವರನ್ನು ಗುರುತಿಸಿ ಅಂತವರಿಗೆ ಪ್ರೋತ್ಸಾಹ ನೀಡುವ ಹಾಗೂ ಧನ್ಯವಾದ ತಿಳಿಸುವ ಉದ್ದೇಶದಿಂದ ಮನೆಗಳ ಮುಂದೆ 'ಗ್ರೀನ್ ಹೌಸ್ ಅಫ್ ದಾಸರಹಳ್ಳಿ' ಎಂಬ ನಾಮಫಲಕ ಅಳವಡಿಸಿ ಉತ್ತಮ ಕೆಲಸ ಮಾಡಲಾಗುತ್ತಿದೆ' ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸೌಂದರ್ಯ ಭರತ್ ಹಾಗೂ  ಪಧಾದಿಕಾರಿಗಳ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕ್ಷೇತ್ರದ ಚೊಕ್ಕಸಂದ್ರ ಹಾಗೂ ದಾಸರಹಳ್ಳಿ ವಾರ್ಡ್ ನ ಶಶಿಕುಮಾರ್, ಭೀಮರಾವ್, ಡಾ. ವಿಷ್ಣುಮೂರ್ತಿ ಭಟ್, ಚಂದ್ರಶೇಖರ್, ನಾಯರ್ ಮನೆಗಳಮೇಲೆ ನಿರ್ಮಿಸಿರುವ ತಾರಸಿ ತೋಟಗಳನ್ನು ಅಯ್ಕೆ ಮಾಡಿ ಅಂತಹ ಮನೆಗಳಿಗೆ "ಗ್ರೀನ್ ಹೌಸ್ ಅಫ್ ದಾಸರಹಳ್ಳಿ" ನಾಮಫಲಕ  ಆಳವಡಿಸಿ ಮತ್ತಷ್ಟು ಸಸಿಗಳನ್ನು ಬೆಳೆಸುವ ಪ್ರಯತ್ನ ಕ್ಕೆ ಪ್ರೋತ್ಸಾಹ ನೀಡಿ ಹಸಿರುಕ್ರಾಂತಿಗೆ ಮುನ್ನಡಿ ಬರೆವ ವಿಭಿನ್ನ ಪ್ರಯತ್ನ ಇಂದು ನಡೆಯಿತು.ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ಸೌಂದರ್ಯ ಮಾತನಾಡಿ, ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಮನೆಗಳ ತಾರಸಿಯಲ್ಲಿ ಕೈತೋಟ ನಿರ್ಮಾಣಕ್ಕೆ ಮನೆ ಮಾಲೀಕರು ಹೆಚ್ಚು ಒಲವು ತೋರುತ್ತಿದ್ದುಮನೆಯಲ್ಲಿ ಉತ್ಪತ್ತಿಯಾಗುವ ಹಸಿಕಸದಿಂದ ಗೊಬ್ಬರ ತಯಾರಿಸಿ ಸಸಿಗಳಿಗೆ ನೀಡುವ ಮೂಲಕ  ಹಸಿರು ವಾತಾವರಣ ಸೃಷ್ಟಿ ಮಾಡಬಹುದು. ಜೊತೆಗೆ ಮನೆಗೆ ತರಕಾರಿ ಕೂಡ ಪಡೆಯಬಹುದು.ಇಂತಹ ಒಂದು ಸಣ್ಣ ಪ್ರಯತ್ನದಿಂದ ಮನೆಗಳಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ' ಎಂದರು.ಈ ಸಂದರ್ಭದಲ್ಲಿ ಡಿ ಎಂ ಮಂಜು ಬೆಲ್ಮಾರ್ ಸುರೇಶ್, ಮುನಿ ಕೃಷ್ಣ,ವಿಜಯ್ ಕುಮಾರ್, ವಿನೋದ್ ಗೌಡ, ಮಧು ಗೌಡ, ನವೀನ್ ಕುಮಾರ್, ಸಂತೋಷ್, ಆಂಟೋನಿ, ನಿತೀಶ್ ಮತ್ತಿತರರು ಇದ್ದರು.ವರದಿ : ಪಬ್ಲಿಕ್ ರೈಡ್ ದೇವರಾಜ್

Jun 5, 2026 | 01:39 PM
52 0
ರಾಜ್ಯದಲ್ಲಿ ರೌಡಿಗಳ ವಿರುದ್ಧ ಸಮರ: ತಾಲ್ಲೂಕಿಗೊಂದು ವಿಶೇಷ ಕಾರ್ಯಪಡೆ ರಚನೆಗೆ ಸಿಎಂ ಸೂಚನೆ

ರಾಜ್ಯದಲ್ಲಿ ರೌಡಿಗಳ ವಿರುದ್ಧ ಸಮರ: ತಾಲ್ಲೂಕಿಗೊಂದು ವಿಶೇಷ ಕಾರ್ಯಪಡೆ ರಚನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರತಿ ತಾಲ್ಲೂಕು ಹಾಗೂ ಪೊಲೀಸ್ ಠಾಣೆ ಮಟ್ಟದಲ್ಲಿ ವಿಶೇಷ ಕಾರ್ಯಪಡೆ (ಟಾಸ್ಕ್ ಫೋರ್ಸ್) ರಚಿಸಿ ರೌಡಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದ ಸಿಎಂ, ರೌಡಿಶೀಟರ್‌ಗಳ ಪಟ್ಟಿಯನ್ನು ಕಡ್ಡಾಯವಾಗಿ ಸಿದ್ಧಪಡಿಸಿ ಅವರ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು. ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಯಾವುದೇ ರಾಜಿ ಇರಬಾರದು ಎಂದು ಅವರು ಸ್ಪಷ್ಟಪಡಿಸಿದರು.ಇದೇ ವೇಳೆ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಬೇಕು ಎಂದು ಸೂಚಿಸಿದ ಅವರು, ಎಲ್ಲ ಅಧಿಕಾರಿಗಳು ಬೆಳಿಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು. ಜೊತೆಗೆ, ಅಧಿಕಾರಿಗಳು ತಾಲ್ಲೂಕು ಮಟ್ಟಕ್ಕೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ ತ್ವರಿತ ಪರಿಹಾರ ಕಲ್ಪಿಸುವಂತೆ ನಿರ್ದೇಶನ ನೀಡಿದರು.ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಒತ್ತು ನೀಡಿದ ಮುಖ್ಯಮಂತ್ರಿ, ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಿಸುವ ಪ್ರಸ್ತಾವನೆ ಶೀಘ್ರ ಜಾರಿಗೆ ಬರಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಖಾಲಿ ಇರುವ ಸುಮಾರು 50 ಸಾವಿರ ಶಿಕ್ಷಕರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದೂ ಭರವಸೆ ನೀಡಿದರು.ಸರ್ಕಾರಿ ಹುದ್ದೆಗಳ ಖಾಲಿತನ ನಿವಾರಣೆ, ಶಿಕ್ಷಣ ಕ್ಷೇತ್ರದ ಸುಧಾರಣೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

Jun 4, 2026 | 04:45 PM
125 0
ಕಣಗಲಾ ಸಮೀಪ ಎನ್‌ಎಚ್-48ರಲ್ಲಿ ಭೀಕರ ಅಪಘಾತ: ಅಣ್ಣ-ತಂಗಿ ದುರ್ಮರಣ

ಕಣಗಲಾ ಸಮೀಪ ಎನ್‌ಎಚ್-48ರಲ್ಲಿ ಭೀಕರ ಅಪಘಾತ: ಅಣ್ಣ-ತಂಗಿ ದುರ್ಮರಣ

ಕಣಗಲಾ, ಜೂನ್ 4:ರಾಷ್ಟ್ರೀಯ ಹೆದ್ದಾರಿ 48ರ ಕಣಗಲಾ ಸಮೀಪದ ಕುಂಬಾರ್ ಪ್ಲಾಟ್ ಹಾಸ್ಟೆಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಣ್ಣ ಮತ್ತು ತಂಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.ಮೃತರನ್ನು ಕಣಗಲಾ ಗ್ರಾಮದ ನಿವಾಸಿಗಳಾದ ಅಪ್ಪಾ ಮಹಾಲಿಂಗ ಲಾಟಕರ (60) ಹಾಗೂ ಅವರ ಸಹೋದರಿ ಸುವರ್ಣಾ (62) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ, ಅಪ್ಪಾ ಮಹಾಲಿಂಗ ಲಾಟಕರ ಅವರು ತಮ್ಮ ಸಹೋದರಿ ಸುವರ್ಣಾರನ್ನು ಸ್ಕೂಟಿಯಲ್ಲಿ ಕೂರಿಸಿಕೊಂಡು ನಿಪ್ಪಾಣಿ ಕಡೆಯಿಂದ ಕಣಗಲಾಕ್ಕೆ ಬರುತ್ತಿದ್ದರು. ಈ ವೇಳೆ ಎನ್‌ಎಚ್-48ರ ಕುಂಬಾರ್ ಪ್ಲಾಟ್ ಹಾಸ್ಟೆಲ್ ಸಮೀಪ ಸ್ಕೂಟಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಇದೇ ಸಂದರ್ಭದಲ್ಲಿ ಹಾದುಹೋಗುತ್ತಿದ್ದ ಲಾರಿಯೊಂದು ಅವರ ಮೇಲೆ ಹರಿದಿರುವ ಶಂಕೆ ವ್ಯಕ್ತವಾಗಿದೆ.ಅಪಘಾತದ ತೀವ್ರತೆಗೆ ಅಪ್ಪಾ ಮಹಾಲಿಂಗ ಲಾಟಕರ ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಸುವರ್ಣಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಥವಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಗೆ ಸಂಬಂಧಿಸಿದಂತೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.ವರದಿಗಾರರು: ಸಂತೋಷ ನಿರ್ಮಲೆ(ಪಬ್ಲಿಕ್ ರೈಡ್ ನ್ಯೂಸ್ ಬೆಳಗಾವಿ)

Jun 4, 2026 | 04:13 PM
339 0
ಮನೆಯ ಹೆಂಚು ತೆಗೆದು ₹12.04 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಮನೆಯ ಹೆಂಚು ತೆಗೆದು ₹12.04 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಹಾಸನ, ಜೂನ್ 2: ಜಿಲ್ಲೆಯ ಹೂವಿನಹಳ್ಳಿ ಕಾವಲು ಗ್ರಾಮದಲ್ಲಿ ಹಗಲಿನ ವೇಳೆಯಲ್ಲೇ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮನೆಯ ಹೆಂಚು ತೆಗೆದು ಒಳನುಗ್ಗಿದ ಖದೀಮರು ₹12.04 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮೇ 31ರಂದು ಬೆಳಿಗ್ಗೆ 9 ಗಂಟೆಗೆ ರಮೇಶ್ ಅವರು ಮನೆಗೆ ಬೀಗ ಹಾಕಿ ಜಮೀನಿನ ಕೆಲಸಕ್ಕೆ ತೆರಳಿದ್ದರು. ಸಂಜೆ ಸುಮಾರು 5.30 ಗಂಟೆಗೆ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.ಮನೆಗೆ ಬಂದ ರಮೇಶ್ ಅವರು ಮೇಲ್ಛಾವಣಿಯ ಹೆಂಚುಗಳನ್ನು ತೆಗೆದಿರುವುದನ್ನು ಗಮನಿಸಿ ಆತಂಕಗೊಂಡು ಒಳಗೆ ಪ್ರವೇಶಿಸಿದ್ದಾರೆ. ಪರಿಶೀಲನೆ ನಡೆಸಿದಾಗ ಕಳ್ಳರು ಕಬ್ಬಿಣದ ಬೀರುವಿನ ಬೀಗ ಮುರಿದು ಅದರಲ್ಲಿದ್ದ ಅಮೂಲ್ಯ ವಸ್ತುಗಳನ್ನು ದೋಚಿರುವುದು ಕಂಡುಬಂದಿದೆ.ಬೀರುವಿನಲ್ಲಿದ್ದ 114 ಗ್ರಾಂ ತೂಕದ ಚಿನ್ನಾಭರಣಗಳು, ಅಂದಾಜು ₹10.82 ಲಕ್ಷ ಮೌಲ್ಯದವು, 50 ಗ್ರಾಂ ತೂಕದ ಎರಡು ಬೆಳ್ಳಿ ಸರಗಳು (₹20 ಸಾವಿರ ಮೌಲ್ಯ) ಹಾಗೂ ₹1.02 ಲಕ್ಷ ನಗದು ಹಣ ಸೇರಿದಂತೆ ಒಟ್ಟು ₹12.04 ಲಕ್ಷ ಮೌಲ್ಯದ ಆಸ್ತಿ ಕಳುವಾಗಿದೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ಪಡೆದ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಿಬ್ಬಂದಿಯೂ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಹಗಲಿನ ವೇಳೆಯಲ್ಲೇ ನಡೆದ ಈ ಕಳ್ಳತನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

Jun 2, 2026 | 07:37 AM
86 0