ಕ್ರೈಂ News

Discover the latest headlines in this section.

ಬ್ಯಾಹಟ್ಟಿ ಗ್ರಾಮದಲ್ಲಿ ಮಧ್ಯರಾತ್ರಿ ಬರ್ಬರ ಹತ್ಯೆ  ಕೊಡಲಿಯಿಂದ ಹೊಡೆದು ವ್ಯಕ್ತಿಯ ಕೊಲೆ

ಬ್ಯಾಹಟ್ಟಿ ಗ್ರಾಮದಲ್ಲಿ ಮಧ್ಯರಾತ್ರಿ ಬರ್ಬರ ಹತ್ಯೆ ಕೊಡಲಿಯಿಂದ ಹೊಡೆದು ವ್ಯಕ್ತಿಯ ಕೊಲೆ

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಪ್ರಕರಣ ನಡೆದ ಕೇವಲ 12 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬ್ಯಾಹಟ್ಟಿ ಗ್ರಾಮದ ಪಕ್ಕೀರಪ್ಪ @ ಬಸವರಾಜ ಅಕ್ಕಿವಳ್ಳಿ (33) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಪ್ರಕಾಶ್ ಕರಶೆಟ್ಟಿ ಎಂಬಾತ ಹತ್ಯೆ ನಡೆಸಿದ ಆರೋಪದಡಿ ಬಂಧಿತನಾಗಿದ್ದಾನೆ.ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಕಾಶ್ ತನ್ನ ಪತ್ನಿ ಹಾಗೂ ಬಸವರಾಜ ನಡುವಿನ ಅನೈತಿಕ ಸಂಬಂಧದ ಬಗ್ಗೆ ಶಂಕೆ ಹೊಂದಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಕೆಲ ದಿನಗಳಿಂದ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ.ಕಳೆದ ಮಧ್ಯರಾತ್ರಿ ಬ್ಯಾಹಟ್ಟಿ ಗ್ರಾಮದಲ್ಲಿ ಬಸವರಾಜನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಪ್ರಕಾಶ್, ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ಆರಂಭಿಸಿ, ವಿವಿಧ ಸುಳಿವುಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಪ್ರಕರಣ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Jun 20, 2026 | 07:27 AM
371 0
ಲಿವಿಂಗ್ ರಿಲೇಷನ್‌ಶಿಪ್ ಯುವತಿ ಕೊಲೆ: ಪ್ರಿಯಕರ ಸೇರಿ ಮೂವರು ಬಂಧನ

ಲಿವಿಂಗ್ ರಿಲೇಷನ್‌ಶಿಪ್ ಯುವತಿ ಕೊಲೆ: ಪ್ರಿಯಕರ ಸೇರಿ ಮೂವರು ಬಂಧನ

ಬೆಳಗಾವಿ: ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಆಕೆಯನ್ನು ಹತ್ಯೆಗೈದು ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಗಂಗವ್ವ ಹಂಚಿನಮನಿ (25) ಕೊಲೆಯಾದ ಯುವತಿಯಾಗಿದ್ದು, ಹುಕ್ಕೇರಿ ತಾಲೂಕಿನ ರಾಜನಕಟ್ಟಿ ಗ್ರಾಮದ ಬಸವರಾಜ್ ಕರ್ನಾವರ್ (33) ಪ್ರಮುಖ ಆರೋಪಿಯಾಗಿದ್ದಾನೆ. ಬಸವರಾಜ್ ತನ್ನ ತಂದೆ ಯಲ್ಲಪ್ಪ ಹಾಗೂ ಮಾವ ಲಗಮಪ್ಪನೊಂದಿಗೆ ಸೇರಿ ಕೃತ್ಯ ಎಸಗಿರುವುದಾಗಿ ತನಿಖೆಯಲ್ಲಿ ಬಹಿರಂಗವಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಗಂಗವ್ವ ಮತ್ತು ಬಸವರಾಜ್ ಕೆಲ ವರ್ಷಗಳಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು. ಇದೇ ವೇಳೆ ಬಸವರಾಜ್ ಬೇರೆ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದನು. ಇದನ್ನು ಗಂಗವ್ವ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಆರೋಪಿಗಳು ಆಕೆಯ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.ಹತ್ಯೆಯ ಬಳಿಕ ಶವವನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ತಿಲಾರಿ ಘಾಟ್ ಪ್ರದೇಶದ ದಟ್ಟ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದರು. ಮೇ 29ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಚಂದಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ರಸ್ತೆಯ ಸಿಸಿಟಿವಿ ದೃಶ್ಯಗಳು ಹಾಗೂ ಟೋಲ್‌ಗೇಟ್ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಮಹಿಳೆ ಕಾರಿನಲ್ಲಿ ತೆರಳಿದ್ದ ಮಾಹಿತಿ ಲಭ್ಯವಾಗಿತ್ತು. ಬಳಿಕ ವಾಹನದ ಸಂಖ್ಯೆಯನ್ನು ಪತ್ತೆಹಚ್ಚಿದ ಪೊಲೀಸರು ಆರೋಪಿಗಳ ಸುಳಿವು ಕಂಡುಹಿಡಿದು ಕಾರ್ಯಾಚರಣೆ ನಡೆಸಿ ಬಸವರಾಜ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಶವಕ್ಕೆ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೊಲೀಸರು ಅಂತ್ಯಸಂಸ್ಕಾರ ನೆರವೇರಿಸಿದ್ದು, ಬಂಧಿತ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Jun 18, 2026 | 01:35 PM
186 0
"ಬೆಟ್ಟಿಂಗ್ ಚಟಕ್ಕೆ ಬಲಿಯಾದ ಕುಟುಂಬ: ವಿಡಿಯೋ ಮಾಡಿ ಹೋಂ ಗಾರ್ಡ್ ಪತ್ನಿಯ ಬರ್ಬರ ಹತ್ಯೆ, ಪತಿ ಪರಾರಿ"

"ಬೆಟ್ಟಿಂಗ್ ಚಟಕ್ಕೆ ಬಲಿಯಾದ ಕುಟುಂಬ: ವಿಡಿಯೋ ಮಾಡಿ ಹೋಂ ಗಾರ್ಡ್ ಪತ್ನಿಯ ಬರ್ಬರ ಹತ್ಯೆ, ಪತಿ ಪರಾರಿ"

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಸಿಲುಕಿ ಕುಟುಂಬ ಜೀವನ ಹಾಳಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಳನ್ನು ಮಂಜುಳಾ (32) ಎಂದು ಗುರುತಿಸಲಾಗಿದ್ದು, ಅವರು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿ ಪತಿ ಪ್ರದೀಪ್ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.ನಗರದ ಪುಷ್ಪಾಂಜಲಿ ಥಿಯೇಟರ್ ಸಮೀಪದ ನಿವಾಸದಲ್ಲಿ ಈ ದುರ್ಘಟನೆ ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ನಡೆದಿದೆ. ಹತ್ಯೆಗೂ ಮುನ್ನ ಪ್ರದೀಪ್ ವಿಡಿಯೋ ಒಂದನ್ನು ಮಾಡಿ, "ಬೆಟ್ಟಿಂಗ್ ಚಟದಿಂದ ನನ್ನ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದಿದ್ದಾರೆ. ನಾನು ಸಾಯುತ್ತೇನೆ, ನನ್ನ ಹೆಂಡತಿಯೂ ಸಾಯುತ್ತಾಳೆ" ಎಂದು ಹೇಳಿರುವುದು ಬೆಳಕಿಗೆ ಬಂದಿದೆ.ಅಲ್ಲದೆ, ತನ್ನ ಪತ್ನಿ ಮಂಜುಳಾ ಅತ್ತೆ ಹಾಗೂ ನಾದಿನಿಯ ಪ್ರಭಾವದಿಂದ ತನ್ನಿಂದ ದೂರವಾಗಿದ್ದಾಳೆ ಎಂದು ವಿಡಿಯೋದಲ್ಲಿ ಆರೋಪಿಸಿರುವುದಾಗಿ ತಿಳಿದುಬಂದಿದೆ. ಬಳಿಕ ವಿಡಿಯೋ ಮಾಡಿಟ್ಟುಕೊಂಡೇ ಪತ್ನಿಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಘಟನೆಯ ಬಳಿಕ ಆರೋಪಿ ಪ್ರದೀಪ್ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Jun 15, 2026 | 08:27 AM
118 0
ಹುಬ್ಬಳ್ಳಿಯಲ್ಲಿ ಬೇಕರಿ ಮೇಲೆ ದಾಳಿ: ಮಾಲೀಕನಿಗೆ ಹಲ್ಲೆ, ಅಂಗಡಿಯಲ್ಲಿದ್ದ ವಸ್ತುಗಳ ಧ್ವಂಸ

ಹುಬ್ಬಳ್ಳಿಯಲ್ಲಿ ಬೇಕರಿ ಮೇಲೆ ದಾಳಿ: ಮಾಲೀಕನಿಗೆ ಹಲ್ಲೆ, ಅಂಗಡಿಯಲ್ಲಿದ್ದ ವಸ್ತುಗಳ ಧ್ವಂಸ

ಹುಬ್ಬಳ್ಳಿ, ಜೂನ್ 14: ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರ ಪ್ರದೇಶದಲ್ಲಿ ಇರುವ ಬೇಕರಿಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾಲೀಕನ ಮೇಲೆ ಹಲ್ಲೆ ಮಾಡಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವಿರ ಬೇಕರಿಗೆ ನುಗ್ಗಿದ ಕೆಲವರು ಮೊದಲು ಬೇಕರಿ ಮಾಲೀಕರೊಂದಿಗೆ ವಾಗ್ವಾದ ನಡೆಸಿದ್ದಾರೆ. ಮಾತಿನ ಚಕಮಕಿ ತಾರಕಕ್ಕೇರಿದ ವೇಳೆ ದುಷ್ಕರ್ಮಿಗಳು ಮಾಲೀಕನಿಗೆ ಹಲ್ಲೆ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.ಇದರಿಂದಲೂ ತೃಪ್ತರಾಗದ ಆರೋಪಿಗಳು ಅಂಗಡಿಯೊಳಗಿದ್ದ ಆಹಾರ ಪದಾರ್ಥಗಳು, ಗಾಜಿನ ಸಾಮಗ್ರಿಗಳು ಹಾಗೂ ಇತರ ವಸ್ತುಗಳನ್ನು ಧ್ವಂಸಗೊಳಿಸಿ ಸ್ಥಳದಲ್ಲಿ ದಾಂಧಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಹಲ್ಲೆಯಿಂದ ಗಾಯಗೊಂಡ ಬೇಕರಿ ಮಾಲೀಕರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿದಿದೆ.ಸ್ಥಳೀಯ ವ್ಯಾಪಾರಿಗಳು ಇಂತಹ ಘಟನೆಗಳು ವ್ಯಾಪಾರಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Jun 15, 2026 | 05:43 AM
280 0
ಬಂಧಿಸಲು ಹೋದ ಪೊಲೀಸರೇ ಲಂಚ ಬಲೆಗೆ: ಜೈಪುರದಲ್ಲಿ ಬೆಂಗಳೂರು ಪೊಲೀಸ್ ತಂಡ ಎಸಿಬಿ ಬಲೆಗೆ!

ಬಂಧಿಸಲು ಹೋದ ಪೊಲೀಸರೇ ಲಂಚ ಬಲೆಗೆ: ಜೈಪುರದಲ್ಲಿ ಬೆಂಗಳೂರು ಪೊಲೀಸ್ ತಂಡ ಎಸಿಬಿ ಬಲೆಗೆ!

ಬೆಂಗಳೂರು/ಜೈಪುರ: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರು ಎಚ್‌ಎಎಲ್ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಲಂಚ ಸ್ವೀಕರಿಸುವ ವೇಳೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.ಎಚ್‌ಎಎಲ್ ಪೊಲೀಸ್ ಠಾಣೆಯ ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್ ಉಳುವಪ್ಪ ಹಾಗೂ ಕಾನ್ಸ್‌ಟೇಬಲ್ ಯತೀಶ್ ಕಳೆದ ಶುಕ್ರವಾರ ಪ್ರಕರಣದ ಆರೋಪಿಯನ್ನು ಬಂಧಿಸುವ ಉದ್ದೇಶದಿಂದ ಜೈಪುರಕ್ಕೆ ತೆರಳಿದ್ದರು. ಬಂಧನ ಪ್ರಕ್ರಿಯೆ ವೇಳೆ ಆರೋಪಿಯಿಂದ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಈ ಕುರಿತು ದೂರು ಸ್ವೀಕರಿಸಿದ ರಾಜಸ್ಥಾನ ಎಸಿಬಿ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಆರೋಪಿಯಿಂದ ಮೊದಲ ಕಂತಿನ ₹40 ಸಾವಿರ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಪಿಎಸ್‌ಐ ಅನಿತಾ ಸೇರಿದಂತೆ ಮೂವರು ಪೊಲೀಸರು ಎಸಿಬಿ ಅಧಿಕಾರಿಗಳಿಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದರು.ರಾಜಸ್ಥಾನ ಎಸಿಬಿಯ ಎಎಸ್‌ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಜೈಪುರ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆರೋಪಿ ಬಂಧನಕ್ಕೆ ತೆರಳಿದ್ದ ಪೊಲೀಸ್ ತಂಡವೇ ಲಂಚ ಪ್ರಕರಣದಲ್ಲಿ ಸಿಲುಕಿರುವುದು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯುಂಟು ಮಾಡಿದ್ದು, ಮುಂದಿನ ಕ್ರಮದ ಬಗ್ಗೆ ಕುತೂಹಲ ಮೂಡಿಸಿದೆ.

Jun 15, 2026 | 01:59 AM
195 0
ರತ್ನ ಸ್ಕೂಲ್ ಪಕ್ಕದಲ್ಲೇ ವೇಶ್ಯಾವಾಟಿಕೆ ದಂಧೆ? ವೈರಲ್ ವಿಡಿಯೋದಿಂದ ಹುಬ್ಬಳ್ಳಿಯಲ್ಲಿ ಸಂಚಲನ

ರತ್ನ ಸ್ಕೂಲ್ ಪಕ್ಕದಲ್ಲೇ ವೇಶ್ಯಾವಾಟಿಕೆ ದಂಧೆ? ವೈರಲ್ ವಿಡಿಯೋದಿಂದ ಹುಬ್ಬಳ್ಳಿಯಲ್ಲಿ ಸಂಚಲನ

ಹುಬ್ಬಳ್ಳಿ: ನಗರದ ಹಳೆಯ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನ ಸ್ಕೂಲ್ ಸಮೀಪದಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಸ್ಥಳೀಯರ ಪ್ರಕಾರ, ಶಾಲೆಯ ಪಕ್ಕದಲ್ಲೇ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಹ ಈ ಬೆಳವಣಿಗೆ ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ವೈರಲ್ ಆಗಿರುವ ವಿಡಿಯೋದಲ್ಲಿ ಕೆಲ ಅಕ್ರಮ ಚಟುವಟಿಕೆಗಳ ದೃಶ್ಯಗಳು ಕಂಡುಬಂದಿವೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯು ತಕ್ಷಣ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವನಾಥ್ ಸೋಲಂಕೆ ಎಂಬುವರು ಬಾಡಿಗೆಗೆ ವಾಸವಾಗಿದ್ದಾರೆ ಎಂಬ ಮಾಹಿತಿ ಸ್ಥಳೀಯ ವಲಯಗಳಿಂದ ಕೇಳಿಬಂದಿದೆ. ಆದರೆ ಈ ಕುರಿತು ಪೊಲೀಸ್ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಇನ್ನೂ ಹೊರಬಂದಿಲ್ಲ.ಸದ್ಯ ವೈರಲ್ ವಿಡಿಯೋ ಹಾಗೂ ಆರೋಪಗಳು ಹುಬ್ಬಳ್ಳಿ ನಗರದಲ್ಲಿ ಸಂಚಲನ ಸೃಷ್ಟಿಸಿದ್ದು, ಶಾಲೆಯಂತಹ ಸೂಕ್ಷ್ಮ ಪ್ರದೇಶದ ಸಮೀಪದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟ ಚಿತ್ರಣ ಹೊರಬೀಳಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Jun 12, 2026 | 11:43 AM
309 0
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: 9 ಆರೋಪಿಗಳು ಜೈಲು ಪಾಲು

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: 9 ಆರೋಪಿಗಳು ಜೈಲು ಪಾಲು

ದಾವಣಗೆರೆ:ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ 9 ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ.ಜೂನ್ 3ರಂದು ನಡೆದಿದ್ದ ಈ ಅಮಾನವೀಯ ಕೃತ್ಯದ ವಿಡಿಯೋವನ್ನು ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಕುರಿತು ದೂರು ದಾಖಲಾಗುತ್ತಿದ್ದಂತೆ ಬಸವಾಪಟ್ಟಣ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಬಾಲಕ ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಿದ್ದರು.ಬಂಧಿತ 9 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸುವಂತೆ ಆದೇಶಿಸಿತು.ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳು ತಮ್ಮ ಮೊಬೈಲ್‌ಗಳಲ್ಲಿ ಇದ್ದ ವಿಡಿಯೋ ಹಾಗೂ ಫೋಟೋಗಳನ್ನು ಅಳಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆ ಡಿಜಿಟಲ್ ಸಾಕ್ಷ್ಯ ಸಂಗ್ರಹ ಹಾಗೂ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲು ತನಿಖಾ ತಂಡ ಮುಂದಾಗಿದೆ.ಘಟನೆ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Jun 11, 2026 | 03:04 AM
115 0
ಆಸ್ತಿಗಾಗಿ ತಂದೆಯ ಹತ್ಯೆ: ಶವ ತುಂಡರಿಸಿ ಪೂಜಾ ಕೊಠಡಿಯಲ್ಲಿ ಬಚ್ಚಿಟ್ಟ ಮಕ್ಕಳಿಗೆ ಗಲ್ಲು ಶಿಕ್ಷೆ

ಆಸ್ತಿಗಾಗಿ ತಂದೆಯ ಹತ್ಯೆ: ಶವ ತುಂಡರಿಸಿ ಪೂಜಾ ಕೊಠಡಿಯಲ್ಲಿ ಬಚ್ಚಿಟ್ಟ ಮಕ್ಕಳಿಗೆ ಗಲ್ಲು ಶಿಕ್ಷೆ

ಹೈದರಾಬಾದ್:ಆಸ್ತಿ ಮತ್ತು ಪಿಂಚಣಿ ಹಣದ ಆಸೆಗೆ ಹೆತ್ತ ತಂದೆಯನ್ನೇ ವಿಷ ನೀಡಿ ಕೊಂದು, ಬಳಿಕ ಶವವನ್ನು ತುಂಡು ತುಂಡು ಮಾಡಿ ಬಕೆಟ್‌ಗಳಲ್ಲಿ ತುಂಬಿ ಮನೆಯ ಪೂಜಾ ಕೊಠಡಿಯಲ್ಲಿ ಬಚ್ಚಿಟ್ಟಿದ್ದ ಮಗ ಹಾಗೂ ಮಗಳಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಕೃತ್ಯಕ್ಕೆ ಸಹಕರಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.ತೆಲಂಗಾಣದ ಮೇಡ್ಚಲ್–ಮಲ್ಕಾಜಿಗಿರಿ ಜಿಲ್ಲಾ ನ್ಯಾಯಾಲಯವು ಏಳು ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಈ ಮಹತ್ವದ ತೀರ್ಪು ಪ್ರಕಟಿಸಿದೆ.ಪ್ರಕರಣದ ಪ್ರಕಾರ, ರೈಲ್ವೆ ಇಲಾಖೆಯಿಂದ ನಿವೃತ್ತರಾಗಿದ್ದ ಮಹಾರಾಷ್ಟ್ರ ಮೂಲದ ಮಾರುತಿ ಸುತಾರ ಅವರು ತಮ್ಮ ಕುಟುಂಬದೊಂದಿಗೆ ಮಲ್ಕಾಜಿಗಿರಿಯ ಕೃಷ್ಣಾನಗರದಲ್ಲಿ ವಾಸಿಸುತ್ತಿದ್ದರು. ಉದ್ಯೋಗವಿಲ್ಲದೆ ಮನೆಯಲ್ಲೇ ಇದ್ದ ಮಗ ಕಿಶನ್ ಹಾಗೂ ಮಗಳು ಪ್ರಫುಲ್ಲಾ ಹಣಕ್ಕಾಗಿ ತಂದೆಯ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ಪಿಂಚಣಿ ಹಣವನ್ನು ಮಕ್ಕಳ ಹೆಸರಿಗೆ ವರ್ಗಾಯಿಸಲು ಮಾರುತಿ ನಿರಾಕರಿಸಿದ್ದರಿಂದ ಕುಟುಂಬದಲ್ಲೇ ವೈಮನಸ್ಸು ಉಂಟಾಗಿತ್ತು.ತಂದೆಯನ್ನು ಹೇಗೆ ಹತ್ಯೆ ಮಾಡಬೇಕು ಎಂಬ ಕುರಿತು ಮಗಳು ಯೂಟ್ಯೂಬ್‌ನಲ್ಲಿ ಮಾಹಿತಿ ಹುಡುಕಿ, ಉಮ್ಮತ್ತಿ ಬೀಜಗಳ ವಿಷವನ್ನು ಆಹಾರದಲ್ಲಿ ಬೆರೆಸಿ ಹಲವು ದಿನಗಳ ಕಾಲ ನೀಡಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮವಾಗಿ 2019ರ ಆಗಸ್ಟ್ 16ರಂದು ಮಾರುತಿ ಮೃತಪಟ್ಟಿದ್ದರು.ಸಾಕ್ಷ್ಯಗಳನ್ನು ನಾಶಪಡಿಸುವ ಉದ್ದೇಶದಿಂದ ಮಗ ಮತ್ತು ಮಗಳು ಸೇರಿ ಶವವನ್ನು ಹಲವು ತುಂಡುಗಳಾಗಿ ಕತ್ತರಿಸಿ ಬಕೆಟ್‌ಗಳಲ್ಲಿ ತುಂಬಿ ಮನೆಯ ಪೂಜಾ ಕೊಠಡಿಯಲ್ಲಿ ಅಡಗಿಸಿದ್ದರು. ದುರ್ವಾಸನೆ ಬಾರದಂತೆ ಅಗರಬತ್ತಿ ಮತ್ತು ಸುಗಂಧ ದ್ರವ್ಯಗಳನ್ನು ಬಳಸುತ್ತಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಎರಡು ದಿನಗಳ ಬಳಿಕ ಶವದ ತುಂಡುಗಳನ್ನು ಚರಂಡಿಗೆ ಎಸೆಯಲು ಯತ್ನಿಸಿದ ವೇಳೆ ದುರ್ವಾಸನೆಯಿಂದ ಸ್ಥಳೀಯರಿಗೆ ಅನುಮಾನ ಮೂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ಬಹಿರಂಗಗೊಂಡು ಮೂವರನ್ನೂ ಬಂಧಿಸಲಾಗಿತ್ತು.ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ. ಬಾಲಭಾಸ್ಕರ್ ರಾವ್ ಅವರು, ಅಪರೂಪದ ಮತ್ತು ಅತ್ಯಂತ ಕ್ರೂರ ಸ್ವರೂಪದ ಅಪರಾಧವೆಂದು ಪರಿಗಣಿಸಿ ಮಗ ಕಿಶನ್ ಹಾಗೂ ಮಗಳು ಪ್ರಫುಲ್ಲಾಗೆ ಮರಣದಂಡನೆ ವಿಧಿಸಿದ್ದಾರೆ. ಕೊಲೆಗೆ ಸಹಕರಿಸಿದ್ದ ತಾಯಿ ಗಂಗಾಬಾಯಿಗೆ ವಯಸ್ಸಿನ ಆಧಾರದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.ಈ ತೀರ್ಪು ತೆಲಂಗಾಣ ರಾಜ್ಯದ ಇತ್ತೀಚಿನ ವರ್ಷಗಳಲ್ಲಿನ ಅತ್ಯಂತ ಗಮನಾರ್ಹ ಕ್ರಿಮಿನಲ್ ಪ್ರಕರಣಗಳಲ್ಲೊಂದು ಎಂದು ಪರಿಗಣಿಸಲಾಗಿದೆ.

Jun 11, 2026 | 01:59 AM
35 0
ಪ್ರಿಯಕರನ ಜೊತೆ ಬಾಳಲು 6 ವರ್ಷದ ಮಗಳನ್ನೇ ಕೊಂದ ತಾಯಿ?; ಮೂರು ತಿಂಗಳ ಬಳಿಕ FIR ದಾಖಲು

ಪ್ರಿಯಕರನ ಜೊತೆ ಬಾಳಲು 6 ವರ್ಷದ ಮಗಳನ್ನೇ ಕೊಂದ ತಾಯಿ?; ಮೂರು ತಿಂಗಳ ಬಳಿಕ FIR ದಾಖಲು

ಬೆಂಗಳೂರು:ಪ್ರಿಯಕರನೊಂದಿಗೆ ಜೀವನ ನಡೆಸುವ ಉದ್ದೇಶದಿಂದ ತಾಯಿಯೇ ತನ್ನ 6 ವರ್ಷದ ಮಗಳನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಘಟನೆ ನಡೆದ ಸುಮಾರು ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಪ್ರಕರಣದಲ್ಲಿ ವೆನ್ನಿಲಾ ಎಂಬ 6 ವರ್ಷದ ಬಾಲಕಿಯ ಸಾವಿನ ಸಂಬಂಧ ತಾಯಿ ಪ್ರಿಯಾಂಕ ಹಾಗೂ ಆಕೆಯ ಪ್ರಿಯಕರ ಮೋಹನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಬಾಲಕಿಯ ತಂದೆ ಪ್ರವೀಣ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ದಾವಣಗೆರೆ ಮೂಲದ ಪ್ರವೀಣ್ ಹಾಗೂ ಬೆಂಗಳೂರಿನ ಪ್ರಿಯಾಂಕ ಅವರು 2007ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಹಿರಿಯ ಮಗಳಿಗೆ 17 ವರ್ಷ ಹಾಗೂ ಕಿರಿಯ ಮಗಳಿಗೆ 6 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳ ಹಿಂದೆ ಪ್ರಿಯಾಂಕಗೆ ತನ್ನ ಕಾಲೇಜು ಸ್ನೇಹಿತ ಮೋಹನ್ ಮತ್ತೆ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಆಪ್ತತೆ ಬೆಳೆದು ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.ಈ ವಿಚಾರವಾಗಿ ಪತಿ ಪ್ರಶ್ನಿಸಿದಾಗ ಪ್ರಿಯಾಂಕ ವಿಚ್ಛೇದನಕ್ಕಾಗಿ ಒತ್ತಾಯಿಸುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಪ್ರಿಯಾಂಕ ಹಾಗೂ ಮೋಹನ್ ಕಾಡುಗೋಡಿಯಲ್ಲಿ ವಾಸವಾಗಿದ್ದು, ಕಿರಿಯ ಮಗಳು ವೆನ್ನಿಲಾ ಕೂಡ ಅವರೊಂದಿಗೇ ಇದ್ದಳು.ಕಳೆದ ಮಾರ್ಚ್ 24ರಂದು ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಮಗಳ ಸಾವಿನ ಕುರಿತು ವಿಚಾರಿಸಿದಾಗ, ಒಮ್ಮೆ ಬಿರಿಯಾನಿ ತಿನ್ನಿಸಿದ್ದೆ, ಮತ್ತೊಮ್ಮೆ ಐಸ್‌ಕ್ರೀಂ ಕೊಟ್ಟು ಕಾರಿನಲ್ಲಿ ಎಸಿ ಹಾಕಿ ಮಲಗಿಸಿದ್ದೆ. ನಂತರ ಮನೆಗೆ ಬಂದ ಮೇಲೆ ಬೆಳಿಗ್ಗೆ ನೋಡಿದಾಗ ಮಗು ಮೃತಪಟ್ಟಿತ್ತು ಎಂದು ಪ್ರಿಯಾಂಕ ತಿಳಿಸಿದ್ದಳು ಎನ್ನಲಾಗಿದೆ.ಆದರೆ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯನ್ನು ವಿದೇಶದಲ್ಲಿರುವ ಸಂಬಂಧಿ ವೈದ್ಯೆಗೆ ಕಳುಹಿಸಿದಾಗ, ಸಾವಿನ ಹಿಂದೆ ಅನುಮಾನಾಸ್ಪದ ಅಂಶಗಳಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದರಿಂದ ತಂದೆ ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.ತಾಯಿ ಪ್ರಿಯಾಂಕ ಹಾಗೂ ಆಕೆಯ ಪ್ರಿಯಕರ ಮೋಹನ್ ಮಗುವಿಗೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಗುವಿನ ಬಣ್ಣದ ಕಾರಣಕ್ಕೂ ತಾಯಿಗೆ ಅಸಮಾಧಾನವಿದ್ದು, ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು ಮೋಹನ್‌ನನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಪ್ರಿಯಾಂಕಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇದೇ ವೇಳೆ ಬಾಲಕಿಯ FSL ವರದಿಗಾಗಿ ಪೊಲೀಸರು ಕಾಯುತ್ತಿದ್ದು, ವರದಿ ಬಂದ ಬಳಿಕ ಪ್ರಕರಣದ ನಿಜಾಂಶ ಮತ್ತಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.

Jun 6, 2026 | 11:33 AM
291 0
ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

ಬೆಂಗಳೂರು: ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿಯೊಬ್ಬಳು ಬೆಳಗಿನ ಜಾವ ತನ್ನ ಪಿಜಿಯಿಂದ ಹೊರಬಂದು ಟೀ ಕುಡಿಯಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಆಕೆಯನ್ನು ಗಮನಿಸಿದ್ದಾನೆ. ಬಳಿಕ ಯುವತಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಿದ್ದು, ಆಕೆಯ ಕಿರುಚಾಟ ಕೇಳಿದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜನರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.ಘಟನೆಯ ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಯನ್ನು ಸೈಬುಲ್ ಎಂದು ಗುರುತಿಸಲಾಗಿದ್ದು, ಆತ ರಸ್ತೆ ಬದಿಯಲ್ಲಿ ಕಸ ಹಾಗೂ ಕಬ್ಬಿಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಒಂಟಿಯಾಗಿ ತೆರಳುತ್ತಿದ್ದ ಯುವತಿಯನ್ನು ಕಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡ ವೈಟ್‌ಫೀಲ್ಡ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Jun 4, 2026 | 08:13 AM
123 0
ಖಾತೆ ಬದಲಾವಣೆಗೆ ₹25 ಸಾವಿರ ಲಂಚ: ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಖಾತೆ ಬದಲಾವಣೆಗೆ ₹25 ಸಾವಿರ ಲಂಚ: ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಪಬ್ಲಿಕ್ ರೈಡ್ ಚಾಮರಾಜನಗರ:ಖಾತೆ ಬದಲಾವಣೆ ಮಾಡಿಕೊಡುವ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ವೇಳೆ ಚಾಮರಾಜನಗರ ನಗರಸಭೆಯ ಇಬ್ಬರು ಅಧಿಕಾರಿಗಳು ಹಾಗೂ ಓರ್ವ ಮಧ್ಯವರ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ನಗರಸಭೆಯ ಕಂದಾಯ ಅಧಿಕಾರಿ ಹೇಮಂತಕುಮಾರ್, ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ಹಾಗೂ ಮಧ್ಯವರ್ತಿ ಹಬೀಬ್ ಬಂಧಿತ ಆರೋಪಿಗಳಾಗಿದ್ದಾರೆ.ಮೀಸೆ ನಾಗರಾಜು ಎಂಬುವರ ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ₹25 ಸಾವಿರ ಲಂಚ ನೀಡುವಂತೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ನಾಗರಾಜು ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಬಂಧಿತರಿಂದ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಈ ಘಟನೆ ನಗರಸಭೆ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು ಸಿಕ್ಕಂತಾಗಿದೆ.

Jun 3, 2026 | 03:30 AM
58 0
ಪ್ರಿಯಕರನ ಕೈಯಲ್ಲಿ ಮಹಿಳೆಯ ದಾರುಣ ಹತ್ಯೆ: ಐದು ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಪ್ರಿಯಕರನ ಕೈಯಲ್ಲಿ ಮಹಿಳೆಯ ದಾರುಣ ಹತ್ಯೆ: ಐದು ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ವಾರಂಗಲ್: ಜಿಲ್ಲೆಯ ದುಗ್ಗೊಂಡಿ ಮಂಡಲದಲ್ಲಿ ಸಂಚಲನ ಸೃಷ್ಟಿಸಿದ್ದ ಮಹಿಳೆಯ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅನೈತಿಕ ಸಂಬಂಧದ ಅನುಮಾನವೇ ಕೊಲೆಗೆ ಕಾರಣ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಮೃತ ಮಹಿಳೆಯನ್ನು ದುಗ್ಗೊಂಡಿ ಮಂಡಲದ ಲಕ್ಷ್ಮೀಪುರಂ ಗ್ರಾಮದ ಸುಮಲತಾ ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಸುಮಲತಾ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಪತಿಯ ಸಾವಿನ ಬಳಿಕ ಸುರೇಶ್ ಎಂಬಾತನೊಂದಿಗೆ ಸಹಜೀವನ ನಡೆಸುತ್ತಿದ್ದಳು ಎಂದು ತಿಳಿದುಬಂದಿದೆ.ಪೊಲೀಸರ ತನಿಖೆ ಪ್ರಕಾರ, ಸುಮಲತಾ ತನ್ನನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಸುರೇಶ್‌ಗೆ ಇತ್ತು. ಇದೇ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಪದೇ ಪದೇ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕೋಪಗೊಂಡ ಸುರೇಶ್, ಸುಮಲತಾಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಯೋಜನೆಯಂತೆ ಆಕೆಯನ್ನು ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆ ಬಳಿ ಕರೆದುಕೊಂಡು ಹೋಗಿ, ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತನಿಖೆ ನಡೆಸಿ, ಕೇವಲ ಐದು ದಿನಗಳಲ್ಲೇ ಹತ್ಯೆಯ ಹಿಂದಿನ ಸತ್ಯಾಂಶವನ್ನು ಬಹಿರಂಗಪಡಿಸಿದ್ದಾರೆ. ಆರೋಪಿ ಸುರೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಈ ಘಟನೆ ವಾರಂಗಲ್ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸಂಬಂಧಗಳಲ್ಲಿ ಮೂಡುವ ಅನುಮಾನ ಮತ್ತು ವೈಮನಸ್ಸು ಎಂತಹ ದುರ್ಘಟನೆಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

Jun 2, 2026 | 04:09 AM
220 0